ಬಾಗಲಕೋಟೆ/ ಜಮಖoಡಿ: ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಫೆ.೨೨ ರಂದು ಸಂಜೆ ೬.೦೦ ಗಂಟೆಗೆ ತಿಂಗಳ ನಾಲ್ಕನೆಯ ಭಾನುವಾರದ ಮಾಸಿಕ ಕಾರ್ಯಕ್ರಮ ‘ಶ್ರೀಗುರುದೇವ ಸತ್ಸಂಗ’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗುರುದೇವಾಶ್ರಮದ ಹರ್ಷಾನಂದ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ರಾಮಾರೂಢ ಮಠದ ಶಂಕರಾರೂಢ ಮಹಾಸ್ವಾಮಿಗಳು ‘ಪ್ರಪಂಚದೊoದಿಗೆ ಪಾರಮಾರ್ಥ’ ವಿಷಯ ಕುರಿತು ಅನುಭಾವ ಹಂಚಿಕೊಳ್ಳಲಿದ್ದಾರೆ. ಶ್ರೀಗುರುದೇವ ಸಂಗೀತ ಬಳಗದಿಂದ ಸಂಗೀತ ಸೇವೆ ನಡೆಯಲಿದೆ. ನಿವೃತ್ತ ಉಪನ್ಯಾಸಕಿ ವಿಮಲಾ ಸಂಗಮೇಶ ಕುಬಕಡ್ಡಿ ಇವರು ಪ್ರಸಾದ ಸೇವೆ ನೆರವೇರಿಸುವರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ



















