ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉತ್ತರ ಕರ್ನಾಟಕಕ್ಕೆ ಸಂತಸದ ಸುದ್ದಿ, ಬಳ್ಳಾರಿ–ಹೊಸಪೇಟೆ ನಡುವೆ 3ನೇ ಮತ್ತು 4ನೇ ರೈಲ್ವೆ ಮಾರ್ಗಕ್ಕೆ ಕೇಂದ್ರ ಅನುಮೋದನೆ

ಕೇಂದ್ರ ಸಚಿವ ಸಂಪುಟವು ಬಳ್ಳಾರಿ–ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಈ ಯೋಜನೆಯು ಪ್ರಸ್ತುತ ಜೋಡಿ ಹಳಿಯನ್ನು ಚತುಷ್ಪಥಕ್ಕೆ ಮೇಲ್ದರ್ಜೆಗೇರಿಸಲಿದ್ದು, ಇದರಿಂದ ಸರಕು ಸಾಗಣೆ ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ.

ನವದೆಹಲಿ: ಬಳ್ಳಾರಿ–ಹೊಸಪೇಟೆ ನಡುವಿನ ರೈಲು ಸಂಚಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಮೂರನೇ ಮತ್ತು ನಾಲ್ಕನೇ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅಧಿಕೃತ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ಯೋಜನೆಗೆ ಹಸಿರು ನಿಶಾನೆ ದೊರೆತಿದೆ.

ಈ ಸಭೆಯಲ್ಲಿ ಕಾಸರಾ–ಮನಮಾಡ್, ದಿಲ್ಲಿ–ಅಂಬಾಲಾ ಸೇರಿದಂತೆ ಒಟ್ಟು ಮೂರು ಪ್ರಮುಖ ರೈಲ್ವೆ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದ್ದು, ಇದರಲ್ಲಿ ಬಳ್ಳಾರಿ–ಹೊಸಪೇಟೆ ಮಾರ್ಗವೂ ಸೇರಿದೆ. ಈ ಮೂರೂ ಯೋಜನೆಗಳ ಒಟ್ಟು ಅಂದಾಜು ವೆಚ್ಚ ₹18,509 ಕೋಟಿ ಆಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಜೋಡಿ ಮಾರ್ಗದಿಂದ ಚತುಷ್ಪಥಕ್ಕೆ ಮೇಲ್ದರ್ಜೆ
ಪ್ರಸ್ತುತ ಬಳ್ಳಾರಿ–ಹೊಸಪೇಟೆ ನಡುವಿನ ರೈಲು ಮಾರ್ಗ ಜೋಡಿ ಹಳಿಯಲ್ಲಿದ್ದು, ಇದೀಗ ಅದನ್ನು ಚತುಷ್ಪಥ (ನಾಲ್ಕು ಹಳಿ) ಮಾರ್ಗವಾಗಿ ಅಭಿವೃದ್ಧಿಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಕ್ರಮದಿಂದ ಪ್ರಯಾಣಿಕ ರೈಲುಗಳ ಜೊತೆಗೆ ಸರಕು ಸಾಗಣೆ ರೈಲುಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಳವಾಗಲಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!