ಬಳ್ಳಾರಿ / ಕಂಪ್ಲಿ : ಮಕ್ಕಳನ್ನೊಳಗೊಂಡ ಕುಟುಂಬ ಆಧರಿತ ದಂತಪುರಾಣ ಚಿತ್ರವು ರಾಜ್ಯಾಧ್ಯಂತ ಪ್ರಸರಿಸಬೇಕಾಗಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಪಟ್ಟಣದ ಚಂದ್ರಕಲಾ ಚಿತ್ರಮಂದಿರಲ್ಲಿ ಮಂಗಳವಾರ ದಂತಪುರಾಣ ಚಿತ್ರ ವೀಕ್ಷಿಸಿದ ನಂತರ ಮಾತನಾಡಿ, ಈ ಸಿನಿಮಾದಿಂದ ಜನತೆಗೆ ಒಳ್ಳೆಯ ಸಂದೇಶವನ್ನು ನೀಡಿದೆ. ಬರುವ ಅಧಿವೇಶನದಲ್ಲಿ ಮಾನ್ಯ ಸಿಎಂ, ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಮೂರು ರಾಜ್ಯ ಪ್ರಶಸ್ತಿ ಪುರಸ್ಕೃತ ಈ ಚಿತ್ರವನ್ನು ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲೂಕು ಮಟ್ಟದಲ್ಲಿ ಬಿಡುಗಡೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ವಿಶಾಲ್ ರಾಜ್ ಅವರ ನಿರ್ದೇಶಕ ಹಾಗೂ ನವೀನ್ ಶರ್ಮ ಅವರ ನಿರ್ಮಾಪಕದಲ್ಲಿ ತೆರೆ ಕಂಡ ಅತ್ಯದ್ಬುತ ಚಿತ್ರವನ್ನು ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಆಗಮಿಸಿ, ಸಿನಿಮಾ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದರು.
ನಂತರ ಶಾಸಕ ಗಣೇಶ್ಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಉಪಾಧ್ಯಕ್ಷ ಶರಣಗೌಡ, ಬ್ಲಾಕ್ ಅಧ್ಯಕ್ಷ ಕೆ.ಶ್ರೀನಿವಾಸ, ಕರಿಬಸವನಗೌಡ, ಬಿ.ನಾರಾಯಣಪ್ಪ, ಸಿ.ಆರ್.ಹನುಮಂತ, ಪ್ರಸಾದ್ ಸೇರಿದಂತೆ ಪ್ರೇಕ್ಷಕರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















