ಕೊಪ್ಪಳ ಜಿಲ್ಲೆಯ ಕನಕಗಿರಿಯ ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ವಿಜ್ಞಾನ ದಿನ ಅಂಗವಾಗಿ 4ನೇ ತರಗತಿ 5ನೇ ತರಗತಿ 6ನೇ ತರಗತಿ ಮತ್ತು 7ನೇ ತರಗತಿ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಂದ ವಿಜ್ಞಾನಿಗಳು ಆವಿಷ್ಕರಿಸಿರುವ ವಸ್ತುಗಳನ್ನು ಪ್ರಾಯೋಗಿಕವಾಗಿ ಪ್ರದರ್ಶನ ಮಾಡುವುದರ ಮೂಲಕ ಎಲ್ಲಾ ಇತರೆ ವಿದ್ಯಾರ್ಥಿಗಳಿಗೆ ತಾರ್ಕಿಕ ಜ್ಞಾನ ಮತ್ತು ಪ್ರಾಯೋಗಿಕ ಜ್ಞಾನವನ್ನು ತುಂಬುವ ಒಂದು ವಿಭಿನ್ನ ಕಾರ್ಯಕ್ರಮವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿದ ಎಲ್ಲಾ ಪಾಲಕ, ಪೋಷಕರಿಗೂ, ವಿದ್ಯಾರ್ಥಿಗಳಿಗೂ, ಶಿಕ್ಷಕ ಬಳಗದವರಿಗೂ ಹಾಗೂ ಪತ್ರಿಕಾ ಮಾಧ್ಯಮದವರಿಗೂ ಹೃದಯಪೂರ್ವಕವಾಗಿ ಮುಖ್ಯ ಗುರುಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.
- ಕರುನಾಡ ಕಂದ



















