ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಡಪದ ಸಮಾಜಕ್ಕೆ ಈ ಬಾರಿ ನಿಗಮಕ್ಕೆ ಮಾತ್ರ ಹಣ ಮೀಸಲಿಡುವಂತೆ ಒತ್ತಾಯ

2026 ರ ಸಾಲಿನ‌ ರಾಜ್ಯ ಬಜೆಟ್‌ನಲ್ಲಿ ಹಡಪದ ಅಪ್ಪಣ್ಣ ಸಮಾಜಕ್ಕೆ ನ್ಯಾಯ ಸಿಗಲಿ ಡಾ. ಎಂ.ಬಿ ಹಡಪದ ಒತ್ತಾಯ. ‌

ಕಲಬುರಗಿ :ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಮಾಚ್೯-6 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ಈ 2026 -27 ನೇ ಸಾಲಿನ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜಕ್ಕೆ ನ್ಯಾಯ ಸಿಗಲಿ. ? ಈಗಾಗಲೇ ನಿಗಮ ಮಂಡಳಿ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿದ್ದು. ಈ ನಿಗಮಕ್ಕೆ ೧೦೦ಕೋಟಿ ರೂ‌. ಮೀಸಲಿಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ. ಈ ನಿಗಮದಿಂದ ಸಮಾಜದ ಜನತೆಗೆ ಆಸರೆಯಾಗಲಿ.? ನಿಗಮ ಮುಖಾಂತರ ಹಡಪದ ಅಪ್ಪಣ್ಣ ಕ್ಷೌರಿಕರಿಗೆ ಲೋನ್ (ಸಾಲ) ಸಿಗಲಿ. ಎಂಬುದು ಈ ಸಮಾಜದ ಆಸೆ. ರಾಜ್ಯದ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಡಿಸಿಎಂ. ಡಿ.ಕೆ ಶಿವಕುಮಾರ್ ಮತ್ತು ಅನೇಕ ಕ್ಯಾಬಿನೆಟ್ ದರ್ಜೆಯ ಮಂತ್ರಿಗಳು. ಶಾಸಕರು. ವಿಧಾನ ಪರಿಷತ್ ಸದಸ್ಯರು . ಈ ಹಡಪದ ಅಪ್ಪಣ್ಣ ಸಮಾಜದ ಬಹು ದಿನಗಳ ಬೇಡಿಕೆಯನ್ನು ಈಡೇರಿಸಿ. ಮತ್ತು ಈ ಕಾಯಕ ಸಮಾಜವನ್ನು ಕಡೆಗಣಿಸದ್ದೀರಿ.? ಈ ಸಮಾಜಕ್ಕೆ ನ್ಯಾಯ ಸಿಗಲೇಬೇಕು…? ಹಾಗೇಯೇ ಬಸವಕಲ್ಯಾಣದಲ್ಲಿ ಇರುವ ಬಸವಣ್ಣನವರ ಗವಿ(ಅರಿವಿನ) ಮನೆಯ ಪಕ್ಕದಲ್ಲಿ ಹಡಪದ ಅಪ್ಪಣ್ಣ ನವರ ಗವಿ ( ಅರಿವಿನ ಮನೆಯನ್ನು) ಬಿಕೆಡಿಬಿ ಪ್ರಾಧಿಕಾರಕ್ಕೆ ಸೇರಿಸಿ ಅಭಿವೃದ್ಧಿ ಪಡಿಸಬೇಕು. ಮತ್ತು ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಇರುವ ಶರಣ ಹಡಪದ ಅಪ್ಪಣ್ಣ ನವರ ಜನ್ಮಸ್ಥಳ ‌ಹಾಗೂ ದೇಗಿನಾಳ ಗ್ರಾಮದಲ್ಲಿ ಇರುವ ಹಡಪದ ಲಿಂಗಮ್ಮನವರ ಜನ್ಮಸ್ಥಳವನ್ನು ಬಸವನ ಬಾಗೇವಾಡಿ ಪ್ರಾಧಿಕಾರಕ್ಕೆ ಸೇರಿಸಿ ಅಭಿವೃದ್ಧಿ ಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಲಾಗುವುದು‌ ಮತ್ತು
ಕಲಬುರಗಿ ಜಿಲ್ಲೆಯ ವಿಶ್ವ ವಿದ್ಯಾಲಯದಲ್ಲಿ ಇರುವ ಶರಣ ಹಡಪದ ಅಪ್ಪಣ್ಣ ನವರ ಅಧ್ಯಯನ ಪೀಠದ ಪ್ರತ್ಯೇಕ ಕಟ್ಟಡದ ಅಭಿವೃದ್ಧಿಗೆ 10. ಕೋಟಿ ರೂಪಾಯಿಗಳು ನೀಡಬೇಕು ಮತ್ತು ಈ ಹಡಪದ ಅಪ್ಪಣ್ಣ ಸಮಾಜಕ್ಕೆ ಪರ್ಯಾಯ ಪದವಾದ ನಾಯಿಂದ ಉಪ ಜಾತಿಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಆಗಬೇಕು. ಈ ನಾಯಿಂದ ಉಪ ಜಾತಿಯಲ್ಲಿ ಬರುವ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ರಾಜ್ಯಾದ್ಯಂತ ಅನೇಕ ಗ್ರಾಮೀಣ ಭಾಗದಲ್ಲಿ ಇರುವ ಕ್ಷೌರಿಕ ವೃತ್ತಿಯನ್ನು ಮಾಡುವ ಕಾಯಕ ಬಂಧುಗಳಿಗೆ ” ಕ್ಷೌರ ಕುಟೀರಗಳು’ ನೀಡುವಂತೆ, ಮತ್ತು ಸಮಾಜದ ಜನತೆಯು ಯಾವುದೇ ಗ್ರಾಹಕರು ಬರಲಿ ಅವರಿಗೆ ಯಾವುದೇ ರೋಗ ರುಜಿಣಗಳು ರೋಗದ ಲಕ್ಷಣಗಳು ಇದ್ದರೊ ಸಹ ಅವರಿಗೆ ಕ್ಷೌರ ಸೇವೆ ಸಲ್ಲಿಸುತ್ತಾರೆ .ಈ ಕ್ಷೌರಿಕ ಕುಟುಂಬಕ್ಕೆ ಈ ವೃತ್ತಿಯನ್ನು ಮಾಡುವ ಕಾಯಕ ಬಂಧುಗಳಿಗೆ ಆರೋಗ್ಯ ಹಿತದೃಷ್ಟಿಯಿಂದ ಆರೋಗ್ಯ ವಿಮೆ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆರೋಗ್ಯ ಇಲಾಖೆಯ ಅಡಿಯಲ್ಲಿ ಸ್ಮಾರ್ಟ್ ಕಾರ್ಡ್ ನೀಡುವಂತೆ ಮನವಿ‌ ಮತ್ತು ಈ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜಕ್ಕೆ ಅನ್ಯಾಯ ವಾಗದಿರಲಿ.? ಇನ್ನು ಈ ಹಡಪದ ಸಮುದಾಯದ ಬೇಡಿಕೆಯನ್ನು ಪರಿಗಣಿಸಿ ಇದೇ ಚಳಿಗಾಲದ ಅಧಿವೇಶನದಲ್ಲಿ ಸಹ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಿಕಾರಿಪುರ ತಾಲೂಕಿನ ಶಾಸಕರಾದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ನವರು ಸಹ ಸದನದಲ್ಲಿ ಈ ಸಣ್ಣ ಸಣ್ಣ ಸಮುದಾಯದ ಪರವಾಗಿ ವಿಧಾನ ಸಭೆಯ ಕಲಾಪದಲ್ಲಿ ಗಟ್ಟಿ ಧ್ವನಿಯಾಗಿ ಈ ಸಮಾಜಕ್ಕೆ ಮತ್ತು ಈ ಹಡಪದ ಅಪ್ಪಣ್ಣ ನಿಗಮಕ್ಕೆ ಹಣ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರುವ ಮೂಲಕ ಚರ್ಚೆ ಮಾಡಿದರು ಮತ್ತು ಇನ್ನೂ ಅನೇಕ ಶಾಸಕರು ಈ ಸಮಾಜದ ಪರವಾಗಿ ಧ್ವನಿಯಾಗದೆ ಅನ್ಯಾಯವಾಗಿದೆ.? ಬರಿ ನಿಮಗೆ ಸಮಾಜದ ಮತಗಳು ಚುನಾವಣೆಯಲ್ಲಿ ಪಡೆದು .ಈಗ ಈ ಸಮಾಜಕ್ಕೆ ಮೀಸಲಾತಿ ನೀಡಿದೆ ಇದ್ದರೆ ಹೇಗೆ.? ಈ ಸಮಾಜವನ್ನು ಪರಿಗಣಿಸಿ.ಈ ಹಿಂದುಳಿದ ಸಮಾಜವನ್ನು ಎಸ್ ಸಿ ಗೇ ಅಥವಾ ಎಸ್ ಟಿ ಗೆ ಸೇರಿಸುವ ಕೆಲಸ ರಾಜ್ಯ ಸರ್ಕಾರ ಮಾಡಲಿ.? ಈ ಸಣ್ಣ ಸಣ್ಣ ಸಮುದಾಯವು ಅಭಿವೃದ್ದಿಗೆ ನ್ಯಾಯ ಸಿಗಲಿ ತಾವು ಇದೇ ಮಾರ್ಚ-೬ ರಂದು ಮಂಡನೆ ಮಾಡಲಿರುವ ರಾಜ್ಯ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜಕ್ಕೆ , ಅನ್ಯಾಯ ಆಗದಿರಲಿ‌.?
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾನತೆಯ ಹರಿಕಾರ ಎಂಬುದು ಎಲ್ಲರ ಮಟ್ಟಿಗೆ ಹುಸಿಯಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಕಲಬುರ್ಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಸಂಘಟನಾ ಕಾರ್ಯದರ್ಶಿಗಳು- ಡಾ.ಮಲ್ಲಿಕಾರ್ಜುನ ಬಿ‌ ಹಡಪದ ಸುಗೂರ ಎನ್. ಒತ್ತಾಯಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!