ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

IND vs ENG: ರಣರೋಚಕ ಪಂದ್ಯದಲ್ಲಿ ಇಂಗ್ಲೆಂಡ್‌ ಮಣಿಸಿ ಫೈನಲ್​ಗೇರಿದ ಟೀಂ ಇಂಡಿಯಾ

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್​ನ (2026 T20 World Cup) ಎರಡನೇ ಸೆಮಿಫೈನಲ್‌ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್​ಗೇರಿದೆ.

ರನ್​ಗಳ ಮಳೆಯೇ ಹರಿದ ಈ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 253 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಕೂಡ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿತು. ಗುರಿ ದೊಡ್ಡದಿದ್ದರಿಂದ ಇಂಗ್ಲೆಂಡ್‌, ಭಾರತಕ್ಕೆ ಸುಲಭ ತುತ್ತಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಆಂಗ್ಲರ ಪರ ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ಜೆಕಬ್ ಬೆಥೆಲ್ ಸ್ಫೋಟಕ ಶತಕ ಸಿಡಿಸಿ ಇಂಗ್ಲೆಂಡ್​ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಆದರೆ ಕೊನೆಯ 4 ಓವರ್​ಗಳಲ್ಲಿ ಪಂದ್ಯದ ದಿಕ್ಕು ಬದಲಿಸಿದ ಭಾರತದ ಬೌಲರ್​ಗಳು ತಂಡವನ್ನು ರಣರೋಚಕ ಗೆಲುವಿನತ್ತ ಕೊಂಡೊಯ್ದರು.

253 ರನ್ ಕಲೆಹಾಕಿದ ಭಾರತ
ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು.ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 253 ರನ್ ಕಲೆಹಾಕಿತು. ಇದು ಟಿ20 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ತಂಡವೊಂದು ಕಲೆಹಾಕಿದ ಅತ್ಯಧಿಕ ಮೊತ್ತವಾಗಿತ್ತು.ಭಾರತ ಈ ದಾಖಲೆಯ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 89 ರನ್ ಗಳಿಸಿದರೆ, ಶಿವಂ ದುಬೆ 25 ಎಸೆತಗಳಲ್ಲಿ 43 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 27 ರನ್ ಗಳಿಸಿದರೆ, ತಿಲಕ್ ವರ್ಮಾ 7 ಎಸೆತಗಳಲ್ಲಿ 21 ರನ್ ಗಳಿಸಿದರು.

ಬೆಥೆಲ್ ಏಕಾಂಗಿ ಹೋರಾಟ ವ್ಯರ್ಥ
ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 246 ರನ್‌ಗಳಿಸಲಷ್ಟೇ ಶಕ್ತವಾಯಿತು. ಇಂಗ್ಲೆಂಡ್‌ ಪರ ಏಕಾಂಗಿ ಹೋರಾಟ ನಡೆಸಿದ ಜಾಕೋಬ್ ಬೆಥೆಲ್ ಸೆಮಿಫೈನಲ್‌ನಲ್ಲಿ ಅದ್ಭುತ ಶತಕ ಬಾರಿಸಿದರು. ಬೆಥೆಲ್ 48 ಎಸೆತಗಳಲ್ಲಿ 7 ಸಿಕ್ಸರ್‌ಗಳೊಂದಿಗೆ 105 ರನ್​ಗಳ ಇನ್ನಿಂಗ್ಸ್ ಆಡಿದರು. ಇದು ಬೆಥೆಲ್ ಅವರ ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದ ಮೊದಲ ಶತಕವೂ ಆಗಿತ್ತು. ಆದಾಗ್ಯೂ, ಬೆಥೆಲ್ ಅವರ ಶತಕದ ಹೊರತಾಗಿಯೂ, ಇಂಗ್ಲೆಂಡ್ ಗೆಲುವಿನಿಂದ ವಂಚಿತವಾಯಿತು. ಭಾರತದ ಪರ ಹಾರ್ದಿಕ್ ಪಾಂಡ್ಯ ಅತ್ಯಂತ ಯಶಸ್ವಿ ಬೌಲರ್ ಆಗಿದ್ದು, 4 ಓವರ್‌ಗಳಲ್ಲಿ 38 ರನ್‌ ನೀಡಿ 2 ವಿಕೆಟ್‌ಗಳನ್ನು ಪಡೆದರು. ಸೆಮಿಫೈನಲ್‌ನಲ್ಲಿ ಭಾರತ ಪರ ಆರು ಬೌಲರ್‌ಗಳು ಬೌಲಿಂಗ್ ಮಾಡಿ 5 ವಿಕೆಟ್‌ಗಳನ್ನು ಪಡೆದರು. ಪಾಂಡ್ಯ ಹೊರತುಪಡಿಸಿ, ಇತರ ನಾಲ್ವರು ಬೌಲರ್‌ಗಳು ತಲಾ 1 ವಿಕೆಟ್ ಪಡೆದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!