ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

2026 ರ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹಡಪದ ಅಪ್ಪಣ್ಣ ಸಮಾಜಕ್ಕೆ ಅನ್ಯಾಯ- ಡಾ.ಎಂ.ಬಿ ಹಡಪದ ಸುಗೂರ ಎನ್ ಆಕ್ರೋಶ

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಪ್ರಸಕ್ತ 2026-27 ರ ಸಾಲಿನ ಈ ವರ್ಷದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜದ ಜನತೆಗೆ ನಮ್ಮ ಸಮುದಾಯ ಮಟ್ಟಿಗೆ ನಿರಾಶಾದಾಯಕವಾಗಿದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಡಾ ಮಲ್ಲಿಕಾರ್ಜುನ ಬಿ‌ ಹಡಪದ ಸುಗೂರ ಎನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 12 ನೇ ಶತಮಾನದ ಸಾಂಸ್ಕೃತಿಕ ನಾಯಕ( ವಿಶ್ವಗುರು) ಬಸವಣ್ಣನವರ ಆಪ್ತ ಕಾರ್ಯದರ್ಶಿಗಳಾದ ಶರಣ ಹಡಪದ ಅಪ್ಪಣ್ಣ ಸಮಾಜಕ್ಕೆ ಅನ್ಯಾಯ ಮಾಡಿದ್ದು ಸರಿಯೇ ಎಂಬ ಪ್ರಶ್ನೆ ಜನತೆಗೆ ಕಾಡುತ್ತಿದೆ. ಈ 2026 ರ ರಾಜ್ಯ ಬಜೆಟ್ ನಲ್ಲಿ ನಮ್ಮ ಸಮುದಾಯ ಇಟ್ಟುಕೊಂಡ ನಿರೀಕ್ಷೆ ಹುಸಿಯಾಗಿದೆ ಎಂದರು. ‌ ‌ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ದಿ ನಿಗಮ ಮಂಡಳಿ ಈಗಾಗಲೇ ಪೂರ್ಣಪ್ರಮಾಣದಲ್ಲಿ ಜಾರಿಗೆ ತಂದರು ಈ ನಿಗಮಕ್ಕೆ ನಯಾ ಪೈಸೆ ಹಣ ನೀಡದೆ ಕಡೆಗಣಿಸಿದ್ದಾರೆ ಮತ್ತು ಕಲಬುರಗಿ ಜಿಲ್ಲೆಯ ವಿಶ್ವ ವಿದ್ಯಾಲಯದಲ್ಲಿ ಇರುವ ಹಡಪದ ಅಪ್ಪಣ್ಣ ನವರ ಅಧ್ಯಯನ ಪೀಠದ ಪ್ರತ್ಯೇಕ ಕಟ್ಟಡಕ್ಕೆ ನಯಾ ಪೈಸೆ ಹಣ ನೀಡದೆ ಅನ್ಯಾಯ, ಇದಕ್ಕೂ ಅನುದಾನ ಕೊಟ್ಟಿಲ್ಲ. ಹೆಸರಿಗೆ ಮಾತ್ರ ವಿ.ವಿ ಹಡಪದ ಅಪ್ಪಣ್ಣ ಪೀಠದ ಸ್ಥಾನಮಾನ ಕೊಡಲಾಗಿದೆ. ಪೂರಕ ಅಗತ್ಯತೆಗಳೇ ಒದಗಿಸಿಲ್ಲ, ಇನ್ನು ಈ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಇರುವ ಬಸವಣ್ಣನವರ ಅರಿವಿನ ಮನೆಯ (ಗವಿ) ಪಕ್ಕದಲ್ಲಿ ಶರಣ ಹಡಪದ ಅಪ್ಪಣ್ಣ ನವರ ಅರಿವಿನ ಮನೆ ಇದೆ ಈ ಗವಿಯನ್ನು ಸಹ ಅಭಿವೃದ್ಧಿ ಪಡಿಸಲು ಬಿ.ಕೆ.ಡಿ‌ ಬಿ ಗೆ ಸೇರ್ಪಡೆ ಮಾಡಿ ಎಂದು ಮನವಿ ಪತ್ರ ಸಲ್ಲಿಸಿದ್ದರು. ಈ ಸಮಾಜದ ಅಭಿವೃದ್ಧಿಯ ನಿರ್ಮಾಣವನ್ನು ಕಡೆಗಣಿಸಲಾಗಿದೆ.
ಮತ್ತು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಶರಣ ಹಡಪದ ಅಪ್ಪಣ್ಣ ನವರ ಜನ್ಮಸ್ಥಳ ಮಸಬಿನಾಳ ಗ್ರಾಮ ಹಾಗೂ ಹಡಪದ ಲಿಂಗಮ್ಮ ನವರ ದೇಗಿನಾಳ ಗ್ರಾಮವನ್ನು ಅಭಿವೃದ್ಧಿ ಪಡಿಸಲು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಲು ನಿರಾಕರಣೆಯಾಗಿದೆ. ಹಾಗೆ ಹಡಪದ ಅಪ್ಪಣ್ಣ ಸಮಾಜವನ್ನು ಎಸ್ ಸಿ ಗೆ ಅಥವಾ ಎಸ್ ಟಿ ಗೆ ಸೇರ್ಪಡೆ ಮಾಡಲು ಸಹ ಹಿಂದೇಟು ಹಾಕಿದೆ ಕಾಂಗ್ರೆಸ್ ಸರ್ಕಾರ.? ಈ ಹಡಪದ ಅಪ್ಪಣ್ಣ (ಕ್ಷೌರಿಕ ) ಸಮಾಜದ ಕಾಯಕ ಬಂಧುಗಳಿಗೆ ಜಾತಿ ನಿಂದನೆ ಮಾಡುವ ವ್ಯಕ್ತಿಗಳಿಗೆ ಕಾನೂನು ಪ್ರಕಾರ “ಅಟ್ರಾಸಿಟಿ ‘ಕಾನೂನು ಜಾರಿಗೆ ತರಲು ಸಹ ಹಿಂದೇಟು ಹಾಕಿದ್ದು ಸರಿಯೇ.? ಈ ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮಕ್ಕೆ ಹಣ ನೀಡಿದೆ ಇರುವುದು ನೋವಿನ ಸಂಗತಿಯಾಗಿದೆ. ಈ ಸಮಾಜದ
ಸುಧಾರಣೆಗೂ ಹಣ ಒದಗಿಸಿಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರ ಒಟ್ಟಿನಲ್ಲಿ ನಮ್ಮ ಹಡಪದ ಅಪ್ಪಣ್ಣ ಸಮಾಜಕ್ಕೆ ಅನ್ಯಾಯ
ಮಾಡಲಾಗಿದೆ ಎಂದು ದೂರಿದ್ದಾರೆ. ಕೇಳಿದ್ದೂ, ನಿರ್ಲಕ್ಷಿಸಿ ರಾಜ್ಯಾದ್ಯಂತ ಇರುವ ಸಮಸ್ತ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜಕ್ಕೆ ಅನ್ಯಾಯದ ಮೇಲೆ ಅನ್ಯಾಯವಾಗಿದೆ.? ಮತ್ತು ಈ ಸಮಾಜದ ಬಹು ದಿನಗಳ ಹೋರಾಟದ ಫಲಕ್ಕೊ ಮತ್ತು ಈ ಸಮಾಜದ ಅಭಿವೃದ್ದಿಗೆ ಅನ್ಯಾಯ ಮುಂದುವರೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾನತೆಯ ಹರಿಕಾರ ಎಂಬುದು ಈಗ ನಮ್ಮ ಸಮಾಜದ ಮಟ್ಟಿಗೆ ಹುಸಿಯಾಗಿದೆ ಎಂದು ಟೀಕಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!