ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕ್ಕಳ ಕಲಿಕಾ ಪ್ರಗತಿಗಾಗಿ ಭರವಸೆಯ ಬೆಳಕು ತುಂಬುತ್ತಿರುವ ಬಂಡಳ್ಳಿಯ ಮದರ್ ಮುಜೀದ ಶಾಲೆ

ಹನೂರು: ತಾಲ್ಲೂಕಿನ ಬಂಡಳ್ಳಿ ಮದರ್ ಮುಜೀದ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶ್ರೀ ಅಂಜುಮ್ ರವರ ಮಾರ್ಗದರ್ಶನದಲ್ಲಿ ನನ್ನ ಭವಿಷ್ಯ ನನ್ನ ಕೈಯಲ್ಲಿ ಎಂಬ ವಿನೂತನ ಕಾರ್ಯಕ್ರಮವನ್ನು ಬಂಡಳ್ಳಿ ಗ್ರಾಮದ ಮದರ್ ಮುಜಿದ ಶಾಲೆಯ ಶಿಕ್ಷಕರು ಹಮ್ಮಿಕೊಂಡಿದ್ದಾರೆ. ಮಕ್ಕಳ ಮನೆ ಮನೆಗೆ ಭೇಟಿ ನೀಡಿ ಮಕ್ಕಳ ಕಲಿಕಾಭಿವೃದ್ಧಿಗೆ ಮತ್ತು ಪರೀಕ್ಷೆಯ ಬಗ್ಗೆ ಭರವಸೆಯ ಬೆಳಕನ್ನು ಮತ್ತು ಅರಿವನ್ನು ಮೂಡಿಸುತ್ತಿದ್ದಾರೆ. ಅಕ್ಷರ ಅಸ್ತ್ರವಾಗಲಿ ಪರೀಕ್ಷೆ ಹಬ್ಬವಾಗಲಿ ಎಂದು ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಧೈರ್ಯ ತುಂಬುತ್ತಿದ್ದಾರೆ. ಶಿಕ್ಷಕರ ಈ ಕಾರ್ಯವನ್ನು ಪೋಷಕರು ತುಂಬು ಹೃದಯದಿಂದ ಸ್ವಾಗತಿಸುತ್ತ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.
ಮಕ್ಕಳಿಗಾಗಿ ಮನೆಯಲ್ಲಿ ಓದುವ ವಿಶೇಷ ವೇಳಾಪಟ್ಟಿಯನ್ನು ತಯಾರಿಸಿ ಅದರಂತೆ ಓದಲು ತಿಳಿಸಿದ್ದಾರೆ. ಇದರೊಂದಿಗೆ ಪ್ರತಿನಿತ್ಯ ರಾತ್ರಿ ಮತ್ತು ಬೆಳಗಿನ ಜಾವ ಎಲ್ ಕೆ ಜಿ ಯಿಂದ ಎಂಟನೇ ತರಗತಿವರೆಗೂ ದೂರವಾಣಿ ಮೂಲಕ ತಮ್ಮ ಮಕ್ಕಳು ಓದುತ್ತಿರುವ ಬಗ್ಗೆ ಪೋಷಕರಿಂದ ಸಮಾಲೋಚನೆ ನಡೆಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಪೋಷಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ರವರು ತಿಳಿಸಿರುತ್ತಾರೆ.
ಈ ಸಂಧರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಬಸವರಾಜು, ನಟರಾಜು, ಬಸವಣ್ಣ, ಅಪ್ಸಾನ ಹಾಜರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!