
ಬಳ್ಳಾರಿ / ಕಂಪ್ಲಿ : ಶರಣರು, ಮಹಾತ್ಮರು ನೀಡಿದ ಸಂದೇಶಗಳನ್ನು ಮನುಕುಲಕ್ಕೆ ಮಾರ್ಗದರ್ಶಿಯಾಗಿವೆ. ಅವರುಗಳ ಮಾರ್ಗದಲ್ಲಿ ನಡೆಯುವ ಮೂಲಕ ಬದುಕನ್ನು ಪಾವನ ಮಾಡಿಕೊಳ್ಳಬೇಕು, ಪಟ್ಟಣದಲ್ಲಿ ಸೋಮವಾರ ಶ್ರೀಮದ್ ವೀರಶೈವ ಧರ್ಮ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ಪಂಚಲೋಹದ ಮೂರ್ತಿ ಹಾಗೂ ಕಳಸ-ಕನ್ನಡಿಗಳೊಂದಿಗೆ ಸಕಲ ಮಂಗಲವಾದ್ಯಗಳ ಮೆರವಣಿಗೆಯು ಸಣಾಪುರ ರಸ್ತೆಯ ಶ್ರೀ ಶಾರದಾ ಶಾಲೆಯಿಂದ ಪ್ರಾರಂಭವಾಗಿ, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಗತ್ರಾಯ ಸಂಸ್ಕೃತ ಪಾಠಶಾಲೆಯಲ್ಲಿ ಮುಕ್ತಾಯಗೊಂಡಿತು.
ಮೆರವಣಿಗೆಯ ವೈಶಿಷ್ಟ್ಯ:
ಪಂಚಲೋಹದ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರ ಮೂರ್ತಿಯು ಭವ್ಯ ಮೆರವಣಿಗೆಯ ಆಕರ್ಷಣೆಯಾಗಿತ್ತು.
ಮೆರವಣಿಗೆಯಲ್ಲಿ ಕಳಸ-ಕನ್ನಡಿ, ಮಂಗಲವಾದ್ಯಗಳು, ಮತ್ತು ಸಾಂಸ್ಕೃತಿಕ ತಂಡಗಳು ಪಾಲ್ಗೊಂಡಿದ್ದವು. ಮೆರವಣಿಗೆಯು ಸಣಾಪುರ ರಸ್ತೆಯ ಶ್ರೀ ಶಾರದಾ ಶಾಲೆಯ ಆವರಣದಿಂದ ಆರಂಭವಾಗಿ, ಹಳೆಬಸ್ ನಿಲ್ದಾಣ ಮತ್ತು ಡಾ. ರಾಜಕುಮಾರ್ ಮುಖ್ಯ ರಸ್ತೆಯ ಮೂಲಕ ಸಾಗಿತು. ರೇಣುಕಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ವೀರಶೈವ ಸಮಾಜ ಬಾಂಧವರು ಕರೆ ನೀಡಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















