ಬಳ್ಳಾರಿ / ಕಂಪ್ಲಿ : ‘ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರ ಕನಸಿನಂತೆ ಗ್ರಾಮೀಣ ಜನರ ಸಬಲೀಕರಣಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವು ಬಗೆಯ ಕಾರ್ಯಕ್ರಮಗಳನ್ನು ರೂಪಿಸುತ್ತ ಬಂದಿದೆ‘ ಎಂದು ತಾಲೂಕಿನ ಯೋಜನಾಧಿಕಾರಿ ಎಲ್. ರಾಘವೇಂದ್ರ ತಿಳಿಸಿದರು.
ಡಾ. ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಂಪ್ಲಿ ಹಾಗೂ ಕುರುಗೋಡು ತಾಲೂಕಿನ ಪಟ್ಟಣ, ಗ್ರಾಮಗಳು ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ಪಡೆಯುತ್ತಿರುವ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಬಳಿಕ ಅವರು ಮಾತನಾಡಿದರು.
ನೂರಾರು ಅಶಕ್ತ, ಅನಾಥ, ಕಡು ಬಡತನ, ದುರ್ಬಲ ಕುಟುಂಬಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರು ಮಾಸಾಶನ ಹಾಗೂ ವಾತ್ಸಲ್ಯ ಕಿಟ್, ವಾಸ್ತಲ್ಯ ಮನೆ ನಿರ್ಮಿಸುವುದರ ಮೂಲಕ ಅಸಹಾಯಕರಿಗೆ ನೆರವಾಗುತ್ತಿದ್ದರೆ ಎಂದರು.
ಇಂದು ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನಲ್ಲಿ ನಮ್ಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ಪಡೆಯುತ್ತಿರುವ ಎಲ್ಲಾ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಮಾಡಿದ್ದೇವೆ ಎಂದರು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ಪಡೆಯುತ್ತಿರುವ ಸದಸ್ಯರು ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆ ಅವರಿಗೆ ಮನದಾಳದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕೃಷಿ ಅಧಿಕಾರಿ ಸಂಜೀವ್ ಕುಮಾರ್, ಸಂಪನ್ಮೂಲ ವ್ಯಕ್ತಿ ಬಿ. ಜಿಲಾನಸಾಬ್, ಸೇವಾ ಪ್ರತಿನಿಧಿ ಗಂಗಮ್ಮ, ಸಂಘದ ಸದ್ಯಸರು ಉಪಸ್ಥಿತರಿದ್ದರು.
ವರದಿ : ಕರುನಾಡ ಕಂದ




















