ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿಎಂ ಕಾರ್ಯಕ್ರಮ ಪೂರ್ವಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ‌


ನಾಡಿನ ಭಕ್ತರಿಗೆ ಕೈಬೀಸಿ ಕರೆಯುತ್ತಿದೆ ಶ್ರೀ ಭೋಜಲಿಂಗೇಶ್ವರ ಮಠದ ವಿನೂತನ ಕಟ್ಟಡ ನಿರ್ಮಾಣ ಕಾರ್ಯ ಮುಗಿದು ಲೋಕಾರ್ಪಣೆ ಸಿದ್ದಗೊಂಡಿದೆ.

ಚಿತ್ತಾಪುರ : ತಾಲೂಕಿನ ಸೂಗೂರ ಎನ್ ಗ್ರಾಮದಲ್ಲಿ ಸಚ್ಚಿದಾನಂದ ನಿತ್ಯ ನಿರಂಜನ ಮೂರ್ತಿ ಸ್ವಯಂ ಸಿದ್ದ ಶರಣ ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರರ ನೂತನ ದೇವಸ್ಥಾನ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ, ಮತ್ತು ನೂತನವಾಗಿ ಬೆಳ್ಳಿ ರಥೋತ್ಸವ ಚಾಲನೆ ಹಾಗೂ ಭವ್ಯವಾದ ಕಲ್ಯಾಣ ಮಂಟಪ ಉದ್ಘಾಟನಾ ಸಮಾರಂಭದ ಅಂಗವಾಗಿ ಏಪ್ರಿಲ್ 11, 2026ರಂದು ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸುಗೂರ ಎನ್ ಶ್ರೀಮಠದ ಸ್ಥಳ ಪರಿಶೀಲಿಸಿದರು. ಈ ಕಾರ್ಯಕ್ರಮ ಸ್ಥಳದಲ್ಲಿ ನಡೆಯುತ್ತಿರುವ ಮೂಲಸೌಕರ್ಯ,ವ್ಯವಸ್ಥೆ ಹಾಗೂ ಭದ್ರತಾ ಸಿದ್ಧತೆಗಳನ್ನು ಅವಲೋಕಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ – (CEO) ಶ್ರೀ ಭಂವರ್ ಸಿಂಗ್ ಮೀನಾ, ಐ.ಎ.ಎಸ್..
ಕಲಬುರಗಿ ಜಿಲ್ಲೆ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ,
ಶ್ರೀ ಅಡ್ಡೂರು ಶ್ರೀನಿವಾಸುಲು, ಭಾ.ಪೊ.ಸೇ. (IPS) . ಡಿ.ವೈ ಎಸ್ ಪಿ ಶಂಕರಗೌಡ ಪಾಟೀಲ, ಚಿತ್ತಾಪೂರ ತಹಸೀಲ್ದಾರರಾದ ನಾಗಯ್ಯ ಹಿರೇಮಠ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಪಿಎಸ್‌ಐ , ವಾಡಿ ಪಿ.ಎಸ್ ಐ ತಿರುಮಲ್ಲೆಶೈ‌, ಹಾಗೂ ಪಿಡಬ್ಲ್ಯೂಡಿ, ಪಿಆರ್‌ಇ, ಜೆಇಸ್ಕಾಂ ಇಲಾಖೆಯ ಇಂಜಿನಿಯರ್ ಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಶ್ರೀ ಭೋಜಲಿಂಗೇಶ್ವರ ಸಿದ್ಧ ಸಂಸ್ಥಾನ ಮಠದ ಪೀಠಾದಿಪತಿಗಳಾದ ಪರಮ ಪೂಜ್ಯ ಶ್ರೀ ಶ್ರೀ ಹಿರಗಪ್ಪ ತಾತನವರು ಮತ್ತು ಕಿರಿಯ ಪೀಠಾಧಿಪತಿಗಳಾದ ಪರಮ ಪೂಜ್ಯ ಅಭಿನವ ಶ್ರೀ ಡಾ.ಕುಮಾರ ಭೋಜರಾಜರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ನೂತನ ದೇವಸ್ಥಾನ ಉದ್ಘಾಟನೆ ಮತ್ತು ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ರಾಮಯ್ಯನವರು ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ವಹಿಸಲಿದ್ದಾರೆ. ಪ್ರಮುಖವಾಗಿ ಭೈರತಿ ಸುರೇಶ್, ರಾಮಲಿಂಗಾರೆಡ್ಡಿ, ಶರಣಪ್ರಕಾಶ ಪಾಟೀಲ. ಬಸವರಾಜ ಮತ್ತಿಮೂಡ. ಬಿ. ಜಿ. ಪಾಟೀಲ. ಅವಿನಾಶ್ ಜಾಧವ್. ಕನೀಜ್ ಪಾತೀಮಾ. ಸೇರಿದಂತೆ ಹಲವಾರು ಸಂಪುಟ ದರ್ಜೆಯ ಸಚಿವರು. ಶಾಸಕರು. ಮತ್ತು ಮಂತ್ರಿಗಳು. ಈ ನಾಡಿನ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಶರಣಬಸಪ್ಪ ದರ್ಶನಾಪೂರ, ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ, ಜಮೀರ್ ಅಹ್ಮದ್ ಖಾನ್, ರಾಧಾಕೃಷ್ಣ ದೊಡ್ಡಮನಿ, ಜಿ. ಕುಮಾರ್ ನಾಯಕ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಉಪಸ್ಥಿತರಿರುವರು.
ಈ ಕಾರ್ಯಕ್ರಮ ಅತ್ಯಂತ ಹೆಚ್ಚು ನಿಗಾ ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಂಡು ಹೋಗಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ: ಶ್ರೀಮತಿ ಬಿ. ಫೌಜಿಯಾ ತರನ್ನುಮ್, ಐ.ಎ.ಎಸ್. ಅಧಿಕಾರಿಗಳು ತಿಳಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!