ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿಸರ ಸಂರಕ್ಷಣೆಗೆ ಮಿತ ಬಳಕೆ ಅಗತ್ಯ: ಡಾ. ಸುವರ್ಣಖಂಡಿ

ಜಮಖಂಡಿ: ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಬೇಕು, ಮರುಬಳಕೆ ಮಾಡಬೇಕು. ಐಷಾರಾಮಿ ಜೀವನವನ್ನು ಕೈಬಿಟ್ಟು ಸರಳ ಜೀವನ ನಡೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ನಿವೃತ್ತ ಪ್ರಾಚಾರ್ಯ ಡಾ.ಎಸ್.ಎಸ್. ಸುವರ್ಣಖಂಡಿ ಹೇಳಿದರು.
ವಿಜಯಪುರ ರಸ್ತೆ ಪಕ್ಕದ ರೋಟರಿ ಭವನದಲ್ಲಿ ಶುಕ್ರವಾರ ಸಂಜೆ ಸ್ಥಳೀಯ ರೋಟರಿ ಸಂಸ್ಥೆ ಆಯೋಜಿಸಿದ್ದ ವಾರದ ಸಭೆಯ ಮುಖ್ಯ ಅತಿಥಿಯಾಗಿ ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.
ಪ್ರಾಣಿ ಜನ್ಯ ವಸ್ತುಗಳನ್ನು ಉಪಯೋಗಿಸಬಾರದು. ಸಸಿಗಳನ್ನು ನೆಟ್ಟು ಪೋಷಿಸಿ ಗಿಡಮರಗಳನ್ನು ಬೆಳೆಸಬೇಕು. ಆಹಾರ ಧಾನ್ಯ, ನೀರು, ಮಣ್ಣು ಕಲುಷಿತ ಆಗದಂತೆ ಜಾಗೃತೆ ವಹಿಸಬೇಕು. ಮುಂದಿನ ಪೀಳಿಗೆಗಾಗಿ ಸ್ವಚ್ಛ ಪರಿಸರ ಉಳಿಸಬೇಕು ಎಂದರು.
ಶ್ರೀಧರ ಕಾಖಂಡಕಿ ರೋಟರಿ ಸಂಸ್ಥೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ರೋಟರಿ ಸಂಸ್ಥೆಯ ಅಧ್ಯಕ್ಷ ರಾಜಶೇಖರ ಕೋವಳ್ಳಿ ಸ್ವಾಗತಿಸಿದರು. ಸಂತೋಷ ಹಿರೇಮಠ ಅತಿಥಿಗಳನ್ನು ಪರಿಚಯಿಸಿದರು. ಮಹಾದೇವ ಕಂಕಾಳೆ ರೋಟರಿ ಸಂಸ್ಥೆಯ ಫೋರ್ ವೇ ಟೆಸ್ಟ್ ಓದಿದರು. ಕಾರ್ಯದರ್ಶಿ ಎಂ.ಎಚ್. ಕಡ್ಲಿಮಟ್ಟಿ ವಂದಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!