ಗದಗ/ರೋಣ : ತಾಲೂಕು ಶ್ರೀ ಸಿದ್ದಾರೂಢ ಮಠದಿಂದ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ ಭಾರತದ ರತ್ನ ಡಾ. “ಬಿ. ಆರ್ ಅಂಬೇಡ್ಕರವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿ ಹರಿಕಾರ ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ” ಬಾಬು ಜಗಜೀವನ ರಾಮ್ ರವರ 119ನೇ ಜಯಂತಿ ಅಂಗವಾಗಿ ಮೆರವಣಿಗೆಯು ತಾಲೂಕು ಆಡಳಿತ ತಾಲೂಕು ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ಸಹಯೋಗದಲ್ಲಿ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿ ಹರಿಕಾರರು, ಭಾರತದ ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನರಾಮ್ ಜಯಂತಿಯಲ್ಲಿ ರೋಣ ತಾಲೂಕ ದಂಡಾಧಿಕಾರಿ ಕೆ ನಾಗರಾಜ್ ಅವರು ಅಧ್ಯಕ್ಷತೆ ವಹಿಸಿಕೊಂಡು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಆರ್ ಎಸ್ ಹೊಸಮನಿ, ಸಂಜಯ್ ದೊಡ್ಮನಿ ಇನ್ನೂ ಅನೇಕ ಯುವಕ ಮಿತ್ರರು ಸೇರಿದ್ದರು.
ವರದಿ ಶರಣಪ್ಪಗೌಡ ಸಕ್ಕರಗೌಡರ




















