ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವಣ್ಣನವರ ಜಯಂತಿಯನ್ನು ರಾಷ್ಟ್ರಮಟ್ಟದಲ್ಲಿ ಆಚರಿಸಿ, ರಾಷ್ಟ್ರೀಯ ಪ್ರಜಾಪ್ರಭುತ್ವದ ನಾಯಕರಾಗಿ ಘೋಷಿಸಿ – ಕೇಂದ್ರ ಸರ್ಕಾರಕ್ಕೆ ಶರಣ ಸಂಗಮೇಶ ಜವಾದಿ ಒತ್ತಾಯ.

ಮಾನವೀಯತೆಯ ಮೌಲ್ಯಾಧಾರಿತ ತತ್ವ ಸಿದ್ಧಾಂತಗಳನ್ನು ಜಾಗತಿಕ ಪ್ರಪಂಚಕ್ಕೆ ಸಾರಿದ, ಮನುಕುಲದ ಶ್ರೇಷ್ಠ ಸಂತ, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ರಾಷ್ಟ್ರಮಟ್ಟದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಆಚರಿಸುವಂತೆ ಹಾಗೂ ಬಸವಣ್ಣನವರನ್ನು ರಾಷ್ಟ್ರೀಯ ಪ್ರಜಾಪ್ರಭುತ್ವದ ನಾಯಕರಾಗಿ ಘೋಷಿಸುವಂತೆ ಶರಣ ಸಂಗಮೇಶ ಎನ್ ಜವಾದಿ ರವರು ಕೇಂದ್ರ ಮಂತ್ರಿ ಮಂಡಲಕ್ಕೆ, ವಿಶೇಷವಾಗಿ ದೇಶದ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿಯವರಿಗೆ ವಿನಯಪೂರ್ವಕವಾಗಿ ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, “12ನೇ ಶತಮಾನದಲ್ಲಿಯೇ ‘ಕಾಯಕವೇ ಕೈಲಾಸ’, ‘ಇವನಾರವ ಇವನಾರವ ಇವನಾರವ ಎನ್ನದೆ ಇವ ನಮ್ಮವ’ ಎಂಬ ಸಮಾನತೆಯ ತತ್ವವನ್ನು ಜಗತ್ತಿಗೆ ಸಾರಿದ ಬಸವಣ್ಣನವರು ಪ್ರಜಾಪ್ರಭುತ್ವದ ಮೊದಲ ಪ್ರತಿಪಾದಕರು. ಅನುಭವ ಮಂಟಪದ ಮೂಲಕ ಸಂಸದೀಯ ಚರ್ಚೆಯ ಪರಂಪರೆಗೆ ನಾಂದಿ ಹಾಡಿದ ಮಹಾಪುರುಷರು. ಇಂತಹ ವಿಶ್ವಮಾನವರ ಜಯಂತಿಯನ್ನು ರಾಷ್ಟ್ರಮಟ್ಟದಲ್ಲಿ ಆಚರಿಸಿ, ಅವರನ್ನು ರಾಷ್ಟ್ರೀಯ ಪ್ರಜಾಪ್ರಭುತ್ವದ ನಾಯಕ ಎಂದು ಘೋಷಿಸುವುದರಿಂದ ದೇಶದ ಯುವಪೀಳಿಗೆಗೆ ಬಸವ ತತ್ವದ ಪರಿಚಯವಾಗುತ್ತದೆ. ಸಮಾನತೆ, ಭ್ರಾತೃತ್ವ, ಕಾಯಕ, ದಾಸೋಹ ತತ್ವಗಳು ರಾಷ್ಟ್ರದ ಅಡಿಪಾಯವಾಗುತ್ತವೆ” ಎಂದು ಅಭಿಪ್ರಾಯಪಟ್ಟರು.

“ಕೇಂದ್ರ ಸರ್ಕಾರವು ಕೂಡಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮುಂಬರುವ ಬಸವ ಜಯಂತಿಯಿಂದಲೇ ರಾಷ್ಟ್ರಮಟ್ಟದ ಆಚರಣೆಗೆ ಚಾಲನೆ ನೀಡಬೇಕು” ಎಂದು ಸಂಗಮೇಶ ಜವಾದಿ ಆಗ್ರಹಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!