ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿ ಕೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಂದ ಅರಿವು ಕಾರ್ಯಕ್ರಮ

ಧಾರವಾಡ : ಕಲಘಟಗಿ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ದಿ. 02/05/2026 ರಂದು ಹುಬ್ಬಳ್ಳಿಯ ಗುರುಸಿದ್ದಪ್ಪ ಕೊತಂಬರಿ ಕಾನೂನು ಮಹಾವಿದ್ಯಾಲಯ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಕಾನೂನು ಅರಿವು ಹಾಗೂ ಹಕ್ಕುಗಳ ರಕ್ಷಣೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಕೀಲರಾದ ಗುರುನಾಥ ಮೂಗಣ್ಣವರ ಮತ್ತು ತಾಲೂಕು ಕ ರ ವೆ ಅಧ್ಯಕ್ಷರಾದ ಶಂಕರಗೌಡ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಮುಖಂಡರಾದ ಬಸಯ್ಯ ಹಿರೇಮಠ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ವಿಶೇಷ ಉಪನ್ಯಾಸವನ್ನು ಕಾನೂನು ಸ್ವಯಂ ಸೇವಕರಾದ ನಾಗರಾಜ ಸಿ ಹಂಡಿ ಮತ್ತು ಅನ್ನದಾನೇಶ ವಿ ವಸ್ತ್ರದ ಅವರು ವಿವರವಾಗಿ ಕಾನೂನು ಜಾಗೃತಿಯನ್ನು ಮೂಡಿಸಿದರು. ಅಲ್ಲದೆ ಗ್ರಾಮದ ಸಾಮಾನ್ಯ ಸರ್ವೇ ಮಾಡಿದಾಗ ಕಂಡು ಬಂದ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಾದ ರಾಜಶೇಖರ ಜಂತ್ಲಿ , ಅಭಿಷೇಕ ಗುಂಜಾಳ ಮತ್ತು ಪೂಜಾ ಗೋಕಾಕ್ ಅವರು ಮಾತನಾಡಿ ಅವುಗಳ ಪರಿಹಾರೋಪಾಯಗಳ ಕುರಿತು ತಿಳಿಹೇಳಿಕೊಟ್ಟರು. ಅಲ್ಲದೆ ಈ ಕಾರ್ಯಕ್ರಮದಲ್ಲಿ ಗ್ರಾಮದ ಗುರುಹಿರಿಯರು ಸರ್ವ ಸದಸ್ಯರು ಅಂಗನವಾಡಿ ಸಿಬ್ಬಂದಿ ಮತ್ತು ಯುವಕ ಮಂಡಳಿಯವರು ಹಾಗೂ ಇತರರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಕೊನೆಗೆ ಅತಿಥಿಗಳಿಗೆ ಸನ್ಮಾನವನ್ನು ಮಾಡುವುದರ ಮೂಲಕ ನಾಡಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!