ಕಲಬುರ್ಗಿ : ಜಿಲ್ಲೆಯ ಕಾಳಗಿ ಹಾಗೂ ಚಿಂಚೋಳಿ ಬೇಸಿಗೆ ಪ್ರಖರ ಬಿಸಿಲಿನಿಂದ ತಾಪಮಾನ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಐಪಿ ಸೆಟ್ಗಳಿಗೆ ವಿದ್ಯುತ್ ಮತ್ತೇರಿಸುತ್ತಿರುವುದರಿಂದ ರೈತರು ಹೀಟವೇವ್ಗೆ ತುತ್ತಾಗುವ ಆತಂಕವಿದೆ. ವಿದ್ಯುತ್ ಪೂರೈಕೆಯ ಸಮಯವನ್ನು ಬದಲಾವಣೆ ಮಾಡಿ ರೈತರಿಗೆ ನೆರವಾಗಬೇಕು ಎಂದು ರೈತ ಸಂಘ ತಾಲೂಕ ಘಟಕ ಅಧ್ಯಕ್ಷ ವೀರಣ್ಣ ಗಂಗಾಣಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿರುವ ಅವರು,
ರೈತರು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಾಧ್ಯವಾದಷ್ಟು ಮನೆಯಲ್ಲಿ ಇರುವಂತೆ ಸೂಚಿಸಿದ್ದಾರೆ. ಹೀಗಿದ್ದರೂ ಅವಳಿ ತಾಲ್ಲೂಕಿನಲ್ಲಿ ಐಪಿ ಸೆಟಗಳಿಗೆ ತ್ರಿಪೇಸ್ ವಿದ್ಯುತ್ ಪೂರೈಕೆ ಮಧ್ಯಾಹ್ನ ಮಾಡಲಾಗುತ್ತಿದೆ. ತ್ರಿಫೇಸ್ ವಿದ್ಯುತ್ ಪೂರೈಕೆಯ ಸಮಯ ಬದಲಾವಣೆ ಮಾಡಿ ರೈತರಿಗೆ ನೆರವಾಗಬೇಕು ಎಂದು ರೈತ ಸಂಘದ ಒತ್ತಾಯ.
ವರದಿ ಚಂದ್ರಶೇಖರ್ ಆರ್. ಪಾಟೀಲ್



















