ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ:ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರಿಂದ ಹರ್ಷ ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿಕೆ : ಮತದಾರರ ತೀರ್ಪಿಗೆ ಸಂಭ್ರಮೋತ್ಸವ

ಸಿರುಗುಪ್ಪ-ಬಾಗಲಕೋಟೆ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ಕೇರಳ ರಾಜ್ಯ ವಿಧಾನ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವವಾಗಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಿರುಗುಪ್ಪ ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಅಭಿಮಾನಿಗಳು ಮಹಾತ್ಮ ಗಾಂಧೀಜಿ ಸರ್ಕಲ್ ನಲ್ಲಿ ಹರ್ಷ ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಣೆ ಮಾಡಿದರು ನಂತರ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಬಿ ಎಂ ನಾಗರಾಜ ಅವರ ಗೃಹ ಕಚೇರಿಗೆ ತೆರಳಿ ಗೆಲುವಿನ ಮಹತ್ವದ ಪಾತ್ರ ವಹಿಸಿದುದಕ್ಕೆ ಸಂತಸ ವ್ಯಕ್ತಪಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಬಿ ಎಂ ನಾಗರಾಜ ಅವರು ಚುನಾಯಿತರಾದ ನೂತನ ಶಾಸಕರಿಗೆ ಅಭಿನಂದಿಸಿ ಅವರಿಗೆ ದೊರೆತಿರುವ ಗೌರವಕ್ಕೆ ಅವರ ಯಶಸ್ಸಿಗೆ ಶುಭ ಹಾರೈಸಿದರು. ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಯುವ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ಬಿ ಎಂ ನಾಗರಾಜ ರವರ ಅಭಿಮಾನಿಗಳು ಬಿ ಎಂ ಮನ ಸ್ವೀತ್ ಅಪ್ಪಿ, ಬಿ.ವೆಂಕಟೇಶ್, ಎಚ್. ಗಣೇಶ್, ಪವನ್ ದೇಸಾಯಿ, ಡಿ. ನಾಗರಾಜ, ಮೀರ್ ಹುಸೇನ್, ಮೋದಿನ್, ಮುಲ್ಲಾ ದಾದಾ ಖಲಂದರ್, ಅನ್ಸಾರಿ ಇಸಾಕ್, ಸಲ್ವಾತ್ ಉದ್ದೀನ್, ಡೊಳ್ಳಿ ವಲಿ ರಜಾ, ಗೌಸೇ ರಬ್ಬಾನಿ, ಫ್ರೂಟ್ ರಹೀಂ, ಕೋಟಿ ಜಿಲಾನ್ ಸಂಭ್ರಮದಲ್ಲಿ ಭಾಗವಹಿಸಿದ್ದರು.

ವರದಿ : ಮಸೀದಿ,ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!