ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದುಡಿಯೋಣ ಬಾ ಅಭಿಯಾನದಡಿ ಖಾತ್ರಿ ಕೆಲಸ ಪಡೆಯಿರಿ

ಕಾಯಕ ಬಂಧುಗಳ ಸಭೆಯಲ್ಲಿ ತಾ. ಪಂ. ಐಇಸಿ ಸಂಯೋಜಕ ಸೋಮನಾಥ ನಾಯಕ ಸಲಹೆ

ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೂಲಿಕಾರರಿಗೆ ಕೆಲಸ ನೀಡುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಪ್ರಾರಂಭಿಸಿದ್ದು, ಕೂಲಿಕಾರರು ನರೇಗಾ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ತಾ. ಪಂ. ಐಇಸಿ ಸಂಯೋಜಕ ಸೋಮನಾಥ ನಾಯಕ ರವರು ಹೇಳಿದರು.

ತಾಲೂಕಿನ ಯರಡೋಣ ಗ್ರಾಮ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಆಯೋಜಿಸಿದ್ದ ಕಾಯಕ ಬಂಧುಗಳ ಸಭೆಯಲ್ಲಿ ಮಾತನಾಡಿದರು.

ಬೇಸಿಗೆ ಆರಂಭವಾಗಿದ್ದು ಸ್ಥಳೀಯ ಜನರಿಗೆ ಮನರೇಗಾ ಯೋಜನೆಯಡಿ ಕೆಲಸ ನೀಡಿ, ವಲಸೆ ತಪ್ಪಿಸುವ ಉದ್ದೇಶದಿಂದ ಎಲ್ಲ ಗ್ರಾ. ಪಂ. ವ್ಯಾಪ್ತಿಯಲ್ಲಿ ನರೇಗಾ ಕೂಲಿಕಾರರಿಗೆ ಕೆಲಸ ಆರಂಭಿಸಲಾಗಿದ್ದು ಕಾಯಕ ಬಂಧುಗಳು ನಮೂನೆ-6 ಸಲ್ಲಿಸಿ ಕೆಲಸ ಪಡೆದುಕೊಳ್ಳಬೇಕು.

ನರೇಗಾ ಕೆಲಸಕ್ಕೆ ಬರುವ ಕೂಲಿಕಾರರು ಕಡ್ಡಾಯವಾಗಿ ಎರಡುಬಾರಿ ಹಾಜರಾತಿ ಹಾಕಬೇಕು, ಅಳತೆಗೆ ತಕ್ಕಂತೆ ಕೆಲಸ ಮಾಡಿ ಪೂರ್ಣ ಕೂಲಿ ಪಡೆಯಿರಿ ಎಂದರು.

ಗ್ರಾ. ಪಂ. ಅಭಿವೃದ್ಧಿ ಅಧಿಕಾರಿಗಳಾದ ಶಿವರಾಜ್ ಅವರು ಮಾತನಾಡಿ ಯೋಜನೆಯಡಿ ಮಹಿಳೆಯರು, ವಿಶೇಷ ಚೇತನರು, ಲಿಂಗತ್ವ ಅಲ್ಪ ಸಂಖ್ಯಾತರು, ದುರ್ಬಲ ವರ್ಗದ ಕುಟುಂಬದವರು ಸೇರಿದಂತೆ ಎಲ್ಲ ನೊಂದಾಯಿತ ಕೂಲಿಕಾರರಿಗೆ ನಿರಂತರವಾಗಿ ಕೆಲಸ ನೀಡಲಾಗುತ್ತದೆ ಎಂದರು. ನಂತರ ಸಭೆಯಲ್ಲಿ ಕಾಯಕ ಬಂಧುಗಳು ನಮೂನೆ-6 ನ್ನು ಸಲ್ಲಿಸಿದರು.

ಈ ವೇಳೆ ಗ್ರಾಮ ಪಂಚಾಯತಿ ಗಣಕಯಂತ್ರ ನಿರ್ವಾಹಕರಾದ ಗ್ಯಾನಪ್ಪ ಕುಂಟೋಜಿ, ರಮೇಶ್ ಉಪ್ಪಾರ, ಬಿಎಫ್ಟಿ ಯಮನೂರು, ಗ್ರಾಮ ಕಾಯಕ ಮಿತ್ರರಾದ ಶಿಲ್ಪಾ , ಕಾಯಕ ಬಂಧುಗಳ ಬೀರಪ್ಪ, ಮಲ್ಲಯ್ಯ, ಶರಣಪ್ಪ , ಸರಸ್ವತಿ, ಹನುಮಂತ, ಮಾರುತಿ ಬಸವರಾಜ್ ಸೇರಿ ಇತರರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!