ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೇನು ಸಾಕಾಣಿಕೆ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತಿಳುವಳಿಕೆ

ಕೊಪ್ಪಳ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಭೂಗೊಳಶಾಸ್ತ್ರ ವಿದ್ಯಾರ್ಥಿಗಳಿಗೆ ಜೇನು ಸಾಕಾಣಿಕೆಯ ಮಹತ್ವ ಹಾಗೂ ಅದರ ಉಪಯೋಗಗಳ ಕುರಿತು ಸ್ಥಳೀಯ ಮಟ್ಟದಲ್ಲಿ ವಿಶೇಷ ಅರಿವುಗಾಗಿ ತಾಲ್ಲೂಕಿನ ಗಿಣಿಗೇರಿಯಲ್ಲಿನ ಜೇನು ಸಾಕಣಿಗೆ ಕೇಂದ್ರವಾದ ಸೋಮಶ್ವರ ಎಂಟರ್ ಪ್ರೈಸಸ್ ಫಾರ್ಮ್ ಗೆ ಭೇಟಿ ನೀಡಿ
ಈ ಕೇಂದ್ರದಲ್ಲಿ ಜೇನು ಸಾಕಾಣಿಕೆಯ ವಿವಿಧ ವಿಧಾನಗಳು, ಜೇನುಕಳ್ಳಿಗಳ ಸಂರಕ್ಷಣೆ, ಜೇನು ಉತ್ಪಾದನೆ ಹಾಗೂ ಗ್ರಾಮೀಣ ಜೀವನೋಪಾಯದಲ್ಲಿ ಜೇನು ಸಾಕಾಣಿಕೆಯ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ಸೋಮಶ್ವರ ಎಂಟರ್ ಪ್ರೈಸ್ ಫಾರ್ಮ್ ನ ಸಚಿನ್ ಅವರು ನೀಡಿದರು.
ತಜ್ಞರು ಜೇನು ಸಾಕಾಣಿಕೆ ಕಡಿಮೆ ವೆಚ್ಚದಲ್ಲಿ ಆರಂಭಿಸಬಹುದಾದ ಪರಿಸರ ಸ್ನೇಹಿ ಸ್ವಯಂ ಉದ್ಯೋಗವಾಗಿದ್ದು, ರೈತರು ಹಾಗೂ ಗ್ರಾಮೀಣ ಯುವಕರಿಗೆ ಉತ್ತಮ ಆದಾಯದ ಮೂಲವಾಗಬಹುದು ಎಂದು ಅವರು ವಿವರಿಸುತ್ತಾ ಜೇನುಕಳ್ಳಿಗಳ ಸಂರಕ್ಷಣೆ ಪರಿಸರ ಸಮತೋಲನ ಕಾಪಾಡುವುದಲ್ಲದೆ ಕೃಷಿ ಉತ್ಪಾದಕತೆಯನ್ನೂ ಹೆಚ್ಚಿಸುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಜೇನು ಗೂಡುಗಳ ನಿರ್ವಹಣೆ, ಜೇನು ಸಂಗ್ರಹಣೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಾಯೋಗಿಕವಾಗಿ ತಿಳಿದುಕೊಂಡರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸ್ವಯಂ ಉದ್ಯೋಗ ಹಾಗೂ ಪರಿಸರ ಸ್ನೇಹಿ ಕೃಷಿ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಿತು.
ಈ ಪ್ರಾಯೋಗಿಕ ಭೇಟಿ ಕಾರ್ಯಕ್ರಮದಲ್ಲಿ ಕಾಲೇಜಿನ ಭೂಗೋಳಶಾಸ್ತ್ರದ ಉಪನ್ಯಾಸಕರಾದ ಡಾ. ಪ್ರಕಾಶ ಹುಲ್ಲೂರು, ಶ್ರೀಕಾಂತ್ ಸಿಂಗಾಪುರ್, ಕಸ್ತೂರಿ ಹೊರಪೇಟೆ, ಮಂಜುನಾಥ್, ಸಮಿ ಉದ್ದಿನ್ ಕ್ವಾಜಿ, ಮಹ್ಮದ್ ರಫಿ ಕೆ ಸೂಡಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!