ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ 6 ಕುರಿಗಳು ಸಾವನಪ್ಪಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಗ್ರಾಮದ ರಶೀದ ಬೇಗಂ (48) ಅವರು ಕುರಿ ಮೇಯಿಸುತ್ತಿದ್ದ ಸಿಡಿಲು ಬಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರು ತಕ್ಷಣ ಕಾಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲು ಸೂಚಿಸಿರುವಾಗಿ ತಿಳಿದು ಬಂದಿರುತ್ತದೆ. ಸಿಡಿಲು ಬಡಿದ ಪರಿಣಾಮ ಗಾಯಗೊಂಡ ಮಹಿಳೆಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ ಹಾಗೂ ಕಾಲುಗಳು ಸರಿಸಲು ಆಗುತ್ತಿಲ್ಲ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.
ಇದೇ ವೇಳೆ ಗ್ರಾಮದ ರವಿ ಪೂಜಾರಿ ಎಂಬವರಿಗೆ ಸೇರಿದ ಆರು ಕುರಿಗಳು ಸಿಡಿಲು ಬಡಿದು ಸಾವನಪ್ಪಿರುತ್ತವೆ ಎಂದು ವರದಿಯಾಗಿದೆ.
ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸಿಗೆ ಕರೆ ಮಾಡಿದರು ಸಮಯಕ್ಕೆ ಸರಿಯಾಗಿ ವಾಹನ ಸ್ಥಳಕ್ಕೆ ಬಂದಿರುವುದಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದರು.
ಈ ಘಟನೆ ವಜೀರಗಾಂವ ಗ್ರಾಮದ ಜನರಲ್ಲಿ ಆತಂಕ ಮೂಡಿಸುತ್ತಿದೆ.
ವರದಿ ಚಂದ್ರಶೇಖರ್ ಆರ್. ಪಾಟೀಲ್




















