ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೈಕ್ ರ‍್ಯಾಲಿ ಮೂಲಕ ಜನರಲ್ಲಿ ಹೆಲ್ಮೆಟ್ ಜಾಗೃತಿ ಮೂಡಿಸಿದ ಪೊಲೀಸರು

ಬಳ್ಳಾರಿ / ಕಂಪ್ಲಿ : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ, ಅವಘತಾದಿಂದಾಗುವ ದುರ್ಘಟನೆಗೆ ಅಂತ್ಯವಾಡಬೇಕು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಹಿನ್ನಲೆಯ ಬೈಕ್ ರ್ಯಾಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ ರೋಗ ರುಜಿನಗಳಿಗೆ ಬಲಿಯಾಗುವವರಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಹೆಲ್ಮೆಟ್‌ ಧರಿಸಿ ತಮ್ಮ ಪ್ರಾಣ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು.
ಪಿಐ ಕೆ.ಬಿ.ವಾಸುಕುಮಾರ ಮಾತನಾಡಿ, ಹೆಲ್ಮೆಟ್‌ ಧರಿಸದವರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ. ಪ್ರತಿಯೊಬ್ಬರೂ ಹೆಲ್ಮೆಟ್‌ ಧರಿಸಿ ತಮ್ಮ ಅಮೂಲ್ಯ ಜೀವ ಕಾಪಾಡಲಿ ಎಂಬ ಸದುದ್ದೇಶ ಪೊಲೀಸ್‌ ಇಲಾಖೆಯದ್ದಾಗಿದೆ. ಯಾವುದೇ ಜನಹಿತಾಸಕ್ತಿಯ ಯೋಜನೆ ಸಾಕಾರವಾಗಲು ಜನರ ಸಹಭಾಗಿತ್ವ ಅತಿ ಮುಖ್ಯ. ಆದ್ದರಿಂದ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್‌ ಧರಿಸುವ ಮೂಲಕ ಪೊಲೀಸ್‌ ಇಲಾಖೆಯ ಕಾರ್ಯಕ್ಕೆ ಕೈಜೋಡಿಸಬೇಕು. ಮನೆಯಲ್ಲಿ ಯಾರೇ ಆದರೂ ಹೆಲ್ಮೆಟ್‌ ಧರಿಸದೆ ವಾಹನ ಚಲಾಯಿಸುತ್ತಿದ್ದರೆ ಅವರನ್ನು ಎಚ್ಚರಿಸುವುದು ಯುವಕರ ಕರ್ತವ್ಯ. ಮುಖ್ಯವಾಗಿ ಯುವಕರು ಮೊದಲು ಹೆಲ್ಮೆಟ್‌ ಧರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು ಎಂದರು.
ಇಲ್ಲಿನ ಪೊಲೀಸ್ ಠಾಣೆಯಿಂದ ಪ್ರಾರಂಭ ಬೈಕ್ ರ್ಯಾಲಿ ಜಾಥಾ ಪಟ್ಟಣದ ಪ್ರಮುಖ ರಸ್ತೆಗಲ್ಲಿ ಸಂಚರಿಸಿ, ಕೊಟ್ಟಾಲ್ ರಸ್ತೆ, ಎಪಿಎಂಸಿ, ಮಹಾತ್ಮಗಾಂಧಿ, ಅಂಬೇಡ್ಕರ್ ವೃತ್ತ, ಹೊಸ ಬಸ್ ನಿಲ್ದಾಣ, ನಡುವಲ ಮಸೀದಿ, ಸಂತೆ ಮಾರುಕಟ್ಟೆ, ಸರ್ಕಾರಿ ಆಸ್ಪತ್ರೆ ಮೂಲಕ ಪುನಃ ಪೊಲೀಸ್ ಠಾಣೆಯಲ್ಲಿ ತಲುಪಿತು.
ಈ ಸಂದರ್ಭದಲ್ಲಿ ಎಎಸ್ಐ ಬಸವರಾಜ ಸೇರಿದಂತೆ ಪೊಲೀಸ್, ಗೃಹ ರಕ್ಷಕದಳದ ಸಿಬ್ಬಂದಿ ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!