ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಧುಗಿರಿ ಪುರಸಭೆಯಿಂದ ಏಕಾಏಕಿ ಕಾರ್ಯಾಚರಣೆ: ಶಿರಾ ಗೇಟ್ ಬಳಿ ಬೀದಿ ಮಳಿಗೆಗಳ ತೆರವು, ವ್ಯಾಪಾರಿಗಳ ಕಣ್ಣೀರು

ಮಧುಗಿರಿ ಪುರಸಭೆ ವ್ಯಾಪ್ತಿಯ ಶಿರಾ ಗೇಟ್ ವೃತ್ತದ ಬಳಿ ರಸ್ತೆ ಬದಿ ಸುಮಾರು 15-20ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ 10ಕ್ಕೂ ಹೆಚ್ಚು ಬೀದಿ ಮಳಿಗೆಗಳನ್ನು ಪುರಸಭೆ ಅಧಿಕಾರಿಗಳು ಇಂದು ಮಧ್ಯಾಹ್ನ 2 ಗಂಟೆಗೆ ಏಕಾಏಕಿ ತೆರವುಗೊಳಿಸಿದ್ದಾರೆ.

JCB ಯಂತ್ರಗಳು ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಆಗಮಿಸಿದ ಪುರಸಭೆ ಸಿಬ್ಬಂದಿ, ಜೆರಾಕ್ಸ್, ಟೀ ಕಾಫಿ, ಚಾಟ್ಸ್, ಟೀ, ಟಿಫಿನ್ ಅಂಗಡಿಗಳನ್ನು ತೆರವು ಮಾಡಿದರು. ದಿಢೀರ್ ಕಾರ್ಯಾಚರಣೆಯಿಂದ ಗಾಬರಿಗೊಂಡ ವ್ಯಾಪಾರಿಗಳು ತಮ್ಮ ಸಾಮಗ್ರಿಗಳನ್ನು ರಕ್ಷಿಸಿಕೊಳ್ಳಲು ಪರದಾಡಿದರು.

“15 ವರ್ಷದಿಂದ ಇಲ್ಲಿ ವ್ಯಾಪಾರ ಮಾಡಿ 3 ಮಕ್ಕಳನ್ನು ಓದಿಸುತ್ತಿದ್ದೇನೆ. ಒಂದೇ ಒಂದು ನೋಟಿಸ್ ಕೊಡಲಿಲ್ಲ. ಈಗ ನಾವು ತಿನ್ನೋದು ಏನು?” ಎಂದು ಟೀ ಕಾಫಿ ವ್ಯಾಪಾರಿ ಗೋಳಾಡಿದರು.

ಪುರಸಭೆ ಸ್ಪಷ್ಟನೆ :
ಪುರಸಭೆ ಮುಖ್ಯಾಧಿಕಾರಿ ಶ್ರೀ ಸುರೇಶ್ ಪ್ರತಿಕ್ರಿಯಿಸಿ, “ಶಿರಾ ಗೇಟ್ ಮುಖ್ಯರಸ್ತೆಯಲ್ಲಿ ಫುಟ್‌ಪಾತ್ ಒತ್ತುವರಿಯಿಂದ ತುಂಬಾ ತೊಂದರೆಯಾಗುತ್ತಿದ್ದು ಕೆಲವು ದಿನಗಳಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವಾಗುತ್ತಿದೆ ಹಾಗೂ ಕೆಇಬಿಯ ಕಟ್ಟಡ ಉದ್ಘಾಟನೆ ಇದೆ ಹಾಗಾಗಿ ಒತ್ತುವರಿ, ತೆರವು ಕಡ್ಡಾಯ” ಎಂದು ತಿಳಿಸಿದರು

ಅಲ್ಲಿನ ಸ್ಥಳಿಯರು “ಪರ್ಯಾಯ ವ್ಯವಸ್ಥೆ ಮಾಡದೆ ಬಡವರ ಹೊಟ್ಟೆ ಮೇಲೆ ಹೊಡೆಯುವುದು ಸರಿಯಲ್ಲ.” ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೆರವು ಕಾರ್ಯಾಚರಣೆ ವೇಳೆ ಕೆಲಕಾಲ ಮಾತಿನ ಚಕಮಕಿ ನಡೆದರೂ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ವರದಿ: ರಂಗರಾಜು ಎಂ. ಗರಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!