ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೆ.ಎನ್.ಗಣೇಶಗೆ ಸಚಿವ ಸ್ಥಾನ, ಬಿ.ಝಡ್. ಜಮೀರ್ ಅಹ್ಮದ್ ಖಾನ್ ಗೆ ಡಿಸಿಎಂ ಸ್ಥಾನ ನೀಡುವಂತೆ ಎಂ.ಉಸ್ಮಾನ್ ಒತ್ತಾಯ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಮಿಡಿಯುತ್ತಿರುವ ಶಾಸಕ ಜೆ.ಎನ್.ಗಣೇಶಗೆ ಡಿ.ಕೆ.ಶಿವುಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು, ಮತ್ತು ಅಲ್ಪಸಂಖ್ಯಾತ ಮೀಸಲಾತಿಯಲ್ಲಿ ಸಚಿವ ಝಡ್ ಜಮೀರ್ ಅಹ್ಮದ್ ಇವರಿಗೆ ಉಪಮುಖ್ಯಮಂತ್ರಿ ಸ್ಥಾನ ಕಲ್ಪಿಸಬೇಕೆಂದು ಕಂಪ್ಲಿ ಪುರಸಭೆಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ಉಸ್ಮಾನ್ ಒತ್ತಾಯಿಸಿದರು.
ಅವರು ಸೋಮವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಹಿಂದಿನ‌ ಎರಡು ಅವಧಿಯಲ್ಲಿ ಸುರೇಶಬಾಬು ಶಾಸಕರಾಗಿದ್ದರು. 2013ರಲ್ಲಿ‌ ಜೆ.ಎನ್.ಗಣೇಶ ಅವರು ಪಕ್ಷೇತರವಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದರ ನಡುವೆ ಕುಗ್ಗದೇ, ಆತ್ಮ ಸ್ಥೈರ್ಯದಿಂದ ಗಣೇಶ ಅವರೊಂದಿಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಬಲಗೊಳಿಸಿ, 2018ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗಣೇಶ ಹೊರ ಹೊಮ್ಮಿದರು. ಕ್ಷೇತ್ರದ ಪ್ರತಿ ಮನೆಯ ಮಗನಾಗಿ ಕೆಲಸ ಮಾಡುತ್ತಾ ಬಂದಿದ್ದು, ಇದರಿಂದ ಎರಡನೇ ಬಾರಿಗೆ ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಿ, ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿಯಲ್ಲಿ ಗಣೇಶ ಮುಂಚೂಣಿಯಲ್ಲಿದ್ದಾರೆ. ರಾಜ್ಯದ ಶಾಸಕರಲ್ಲಿ ಅತಿ ಹೆಚ್ಚಾಗಿ ಕ್ಷೇತ್ರದಲ್ಲಿ ಜನಪರ ಕೆಲಸ ಮಾಡಿ್ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಆದ್ದರಿಂದ ಕ್ಷೇತ್ರ ಸೇರಿದಂತೆ ಜಿಲ್ಲಾ ಮತ್ತು ರಾಜ್ಯದಲ್ಲಿ ಮತ್ತಷ್ಟು ಜನರ ಸೇವೆ ಮಾಡಲು ಗಣೇಶ ಇವರಿಗೆ ಸಚಿವ ಸ್ಥಾನ ನೀಡಬೇಕು. ಮತ್ತು ರಾಜ್ಯದಲ್ಲಿ ಜನರೊಂದಿಗೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಇವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!