ಚಿಂಚೋಳಿ : ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಸುಪುತ್ರ ಹಾಗೂ ಮಾಜಿ ಶಾಸಕ ಕೈಲಾಸನಾಥ ಪಾಟೀಲ ಅವರಿಗೆ ವಿಧಾನ ಪರಿಷತ್ (MLC) ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಬೆಂಚೋಳಿ ತಾಲೂಕು ಅಧ್ಯಕ್ಷ ರಾದ ಶರಣು ಪಾಟೀಲ ಮೋತಕವಳ್ಳಿ ಅವರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭದ್ರವಾಗಿ ತಳವೂರಲು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ಕೊಡುಗೆ ಅಪಾರ. ತಮ್ಮ ಅಧಿಕಾರ ಅವಧಿಯಲ್ಲಿ ಚಂದ್ರಂವಳ್ಳಿ ಯಿಂದ ಹಿಡಿದು ಹಾರಂಗಿ ಜಲಾಶಯದವರೆಗೆ ಸಾವಿರಾರು ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿಗೆ ತಂದ ದೂರದೃಷ್ಟಿಯ ನಾಯಕ ಅವರಾಗಿದ್ದರು. 1989ರ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ 179ಶಾಸಕರನ್ನು ಗೆಲ್ಲಿಸಿಕೊಂಡು ಬಂದ ಅವರ ನಾಯಕತ್ವ ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಎಂದು ಸ್ಮರಿಸಿದ್ದಾರೆ.
- ಕರುನಾಡ ಕಂದ ಸುದ್ದಿ




















