ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳು ಪ್ರಕಟವಾಗಿವೆ.
ಸರ್ಕಾರದ ಮೊದಲ ದಿನವೇ ಜನಪರ ಯೋಜನೆಗಳಿಗೆ ಆದ್ಯತೆ ನೀಡಲಾಗಿದ್ದು, ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ “ಉದ್ಯೋಗ ಭಾಗ್ಯ” ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಿಸಲಾಗಿದೆ.
ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವ ಸರ್ಕಾರ, ರಸ್ತೆ ಕಾಮಗಾರಿಗಳಿಗಾಗಿ 2 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ.
ಗ್ರಾಮೀಣ ಯುವಕರ ಸಬಲೀಕರಣಕ್ಕಾಗಿ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಮುಂದಾಗಿದ್ದು, ಈ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗೆ 10 ಲಕ್ಷ ರೂಪಾಯಿ ನೆರವು ನೀಡುವ ಘೋಷಣೆ ಮಾಡಲಾಗಿದೆ.
ಇದರ ಜೊತೆಗೆ, ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ತೀರ್ಮಾನಿಸಲಾಗಿದೆ.
ಅಲ್ಲದೆ, 2500 ಚದರ ಅಡಿ ವರೆಗಿನ ಮನೆ ನಿರ್ಮಾಣಕ್ಕೆ ಕೆಲವು ನಿಯಮಗಳನ್ನು ಸಡಿಲಗೊಳಿಸಿ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವುದಾಗಿ ಸರ್ಕಾರ ತಿಳಿಸಿದೆ.
ಒಟ್ಟಾರೆ, ಅಧಿಕಾರದ ಮೊದಲ ದಿನವೇ ಯುವಕರು, ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶಗಳು ಹಾಗೂ ಆಸ್ತಿ ಮಾಲೀಕರಿಗೆ ಹಲವು ಭರವಸೆಗಳನ್ನು ನೀಡುವ ಮೂಲಕ ಹೊಸ ಸರ್ಕಾರ ಜನರ ಗಮನ ಸೆಳೆದಿದೆ.
ವರದಿ ವಿಠ್ಠಲ ಖೋಕಾಟೆ




















