ಬಳ್ಳಾರಿ / ಕಂಪ್ಲಿ : ವಿಮುಕ್ತ ದೇವದಾಸಿಯರು ಮತ್ತು ಅವರ ಮೂರು ತಲೆಮಾರುಗಳ ಗಣತಿ ಸಮರ್ಪಕವಾಗಿ ನಡೆಸುವಂತೆ ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಜೂಗಲ ಮಂಜುನಾಯಕಗೆ ಗುರುವಾರ ಮನವಿ ಸಲ್ಲಿಸಿದರು.
ತಾಲೂಕು ಅಧ್ಯಕ್ಷೆ ಪಾರ್ವತಿ, ಜಿಲ್ಲಾ ಕಾರ್ಯದರ್ಶಿ ಎ.ಸ್ವಾಮಿ ಮಾತನಾಡಿ, 2007-08ರ ಗಣತಿಯಲ್ಲಿ ರಾಜ್ಯದ 46,800 ವಿಮುಕ್ತ ದೇವದಾಸಿಯರನ್ನು ಗುರುತಿಸಿದ್ದು, 20 ಸಾವಿರಕ್ಕೂ ಅಧಿಕ ವಿಮುಕ್ತ ದೇವದಾಸಿಯರು ಆಗ ಹೊರಗುಳಿದಿದ್ದರು. ಸದ್ಯದ ಗಣತಿಯಲ್ಲಿ 23,385 ವಿಮುಕ್ತ ದೇವದಾಸಿಯರನ್ನು ಮಾತ್ರ ಗುರುತಿಸಲಾಗಿದೆ.
ಈ ಮುಂಚೆ ನಡೆಸಿದ ಗಣತಿ ದೋಷದಿಂದ ಕೂಡಿದೆ. ಪಟ್ಟಿಯಲ್ಲಿ ಇಲ್ಲದ ವಿಮುಕ್ತ ದೇವದಾಸಿಯರ ಗಣತಿ ಮಾಡಬೇಕು ಕೂಡಲೇ ಬಾಕಿ ಪಿಂಚಣಿ ಬಿಡುಗಡೆಗೊಳಿಸಿ ಹಾಗೂ ಮಕ್ಕಳ ಶಿಕ್ಷಣಕ್ಕೆ ತಾಯಿಯ ದೇವದಾಸಿ ದೃಢೀಕರಣ ಪತ್ರ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ತಾಯಮ್ಮ, ಲಕ್ಷ್ಮೀದೇವಿ, ಗಂಗಮ್ಮ, ಮರಿಯಮ್ಮ, ಹೊನ್ನೂರಮ್ಮ, ಹುಲಿಗೆಮ್ಮ, ಶಿವಮ್ಮ, ರಾಜ್ಯ ದೇವದಾಸಿ ಮಹಿಳೆಯರ-ಮಕ್ಕಳ ಹೋರಾಟ ಸಮಿತಿ ತಾಲೂಕು ಕಾರ್ಯದರ್ಶಿ ರಾಮ, ಓಬಳೇಶ ಸೇರಿದಂತೆ ಇತರರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















