ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಗ್ನಿಶಾಮಕ ವಾಹನ ಮತ್ತು ತುರ್ತು ಸೇವಾ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ

ವಿಜಯಪುರ ಜಿಲ್ಲೆಯ ತಾಳಿಕೋಟೆ : ಗಡಿ ಸೋಮನಾಳ ರಸ್ತೆಯಲ್ಲಿರುವ ನೂತನ ಅಗ್ನಿಶಾಮಕ ಹಾಗೂ ತುರ್ತು ಸೇವಾ ಕಟ್ಟಡ ಹಾಗೂ ನೂತನ ಅಗ್ನಿಶಾಮಕ ವಾಹನಕ್ಕೆ ದಿನಾಂಕ 11- 6- 2026 ಗುರುವಾರದಂದು ಮೊದಲು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ವಾಹನ ಉದ್ಘಾಟಕರಾಗಿ ಆಗಮಿಸಬೇಕೆಂದು ಸ್ಥಳೀಯ ಶಾಸಕರಾದ ಶ್ರೀ ಮಾನ್ಯ ಸಿ ಎಸ್ ನಾಡಗೌಡರಿಗೆ ತಮ್ಮ ಪೆರೇಡ್ ಮುಖಾಂತರ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಸ್ಥಳೀಯ ಪುರಸಭೆ ಮಾಜಿ ಸದಸ್ಯರುಗಳಾದ ಪ್ರಭುಗೌಡ ಮದರ್ಕಲ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಂ. ಜಿ. ಪಾಟೀಲರು, ಮಾಜಿ ತಾಳಿಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲರು, ಬಿಂಜಲಬಾವಿ ಸುರೇಶ ನಾಡಗೌಡರು, ಹೆಚ್. ಎಂ.ನಾಯ್ಕ ಹಾಗೂ ಪುರಸಭೆ ಮಾಜಿ ಸದಸ್ಯರಾದ ಮನ್ಸೂರ್ ಅವರು ಸ್ಥಳೀಯ ಗುತ್ತಿಗೆದಾರರಾದ ಕೆಂಭಾವಿಯವರು, ಮುಸ್ಲಿಂ ಬಾಂಧವರ ಗುರುಗಳಾದ ಸಯ್ಯದ್ ಅವರು, ಸ್ಥಳೀಯ ತಾಲೂಕು ಆಡಳಿತ ವರ್ಗದವರು, ಸ್ಥಳೀಯ ಆರಕ್ಷಕ ಸಿಬ್ಬಂದಿಯವರು, ವಿಜಯಪುರ ಹಾಗೂ ಮುದ್ದೇಬಿಹಾಳದ ಅಗ್ನಿ ಶಾಮಕ ದಳದ ಮೇಲಾಧಿಕಾರಿಗಳು ,ಸಹ ಸಿಬ್ಬಂದಿಗಳು, ಶಾಸಕರ ಅಭಿಮಾನಿಗಳು, ಸ್ಥಳೀಯ ಹೋಂ ಗಾರ್ಡ್ ಸಿಬ್ಬಂದಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಸದಸ್ಯರುಗಳು ಭಾಗವಹಿಸಿ ಈ ಉದ್ಘಾಟನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ವರದಿ ಸಂಗಮೇಶ ಸಿ. ಚೌದ್ರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!