ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಹಿತಿ,ಪರಿಸರಪ್ರೇಮಿ ಭೇರ್ಯ ರಾಮಕುಮಾರ ಗೆಸುವರ್ಣ ಪರಿಸರ ಪ್ರಶಸ್ತಿ

ಹಿರಿಯ ಸಾಹಿತಿ, ಪರಿಸರ ಚಿಂತಕ ಭೇರ್ಯ ರಾಮಕುಮಾರ್ ಅವರು ಮೈಸೂರಿನ ಸುವರ್ಣ ಬೆಳಕು ಫೌಂಡೇಶನ್ ಸಂಸ್ಥೆಯ 2016 ರ ಸುವರ್ಣ ಪರಿಸರ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಸ್ವತಃ ಸಾಹಿತಿಗಳು, ಹಿರಿಯ ಪತ್ರಕರ್ತರು ಆಗಿರುವ ಇವರು ಕಳೆದ 1985 ರಿಂದ ಇಲ್ಲಿಯವರೆಗೆ ಮೈಸೂರು,ಮಂಡ್ಯ,ಕೊಡಗು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳ ಸುಮಾರು
ಒಂದು ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಪರಿಸರ ಉಪನ್ಯಾಸಗಳನ್ನು ನಿರಂತರವಾಗಿ ನೀಡಿದ್ದಾರೆ.
ಗ್ರಾಮಾಂತರ ಬುದ್ಧಿ ಜೀವಿಗಳ ಬಳಗ ಅಧ್ಯಕ್ಷರಾಗಿ ತಾವು ನಡೆಸಿರುವ 365 ಸಾಹಿತ್ಯ ಕಾರ್ಯಕ್ರಮಗಳಲ್ಲಿ ಪ್ರತಿ ಕಾರ್ಯಕ್ರಮದಲ್ಲೂ 100 ಸಸಿಗಳನ್ನು ಉಚಿತವಾಗಿ ವಿತರಿಸುತ್ತಾ ಬಂದಿದ್ದಾರೆ.
ಜೊತೆಗೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ, ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಕವಿ ಕಲಾವಿದರಿಂದ ಪರಿಸರ ಪ್ರತಿಜ್ಞೆ ಮಾಡಿಸುತ್ತಿದ್ದಾರೆ.

ಪ್ರತಿಯೊಬ್ಬರೂ ತಮ್ಮ ಜನ್ಮದಿನದಂದು, ತಮ್ಮ ತಂದೆ ತಾಯಿಯ ಜನ್ಮ ದಿನದಂದು , ತಮ್ಮ ಕುಟುಂಬದ ಹಿರಿಯರ ನೆನಪಿನಲ್ಲಿ ಪ್ರತಿ ವರ್ಷವೂ ಒಂದೊಂದು ಸಸಿ ನೆಟ್ಟು ಪೋಷಿಸುವುದಾಗಿ ಇವರು ಎಲ್ಲೆಡೆ ಪ್ರಮಾಣ ಮಾಡಿಸುತ್ತಾ ಬಂದಿದ್ದಾರೆ. ಪರಿಸರ ಸಂರಕ್ಷಣೆಗಾಗಿ ಭೇರ್ಯ ರಾಮಕುಮಾರ್ ಅವರು ಮಾಡುತ್ತಿರುವ ಅಪರೂಪದ ಸೇವೆಯನ್ನು ಪರಿಗಣಿಸಿ ಅವರಿಗೆ ಸುವರ್ಣ ಪರಿಸರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸುವರ್ಣ ಬೆಳಕು ಫೌಂಡೇಶನ್ ಸಂಸ್ಥೆಯ ಜೂನ್ 20 ರಂದು ಮೈಸೂರಿನ ಅರಸು ಬೋರ್ಡಿಂಗ್ ಶಾಲೆಯ ಎದುರು ಪ್ರಕೃತಿ ಫುಡ್ ಸಭಾಂಗಣದಲ್ಲಿ ನಡೆಯಲಿರುವ ಸಾವಯುವ ಕೃಷಿ ಮೇಳದಲ್ಲಿ ಭೇರ್ಯ ರಾಮ್ ಕುಮಾರ್ ಅವರಿಗೆ ಸುವರ್ಣ ಪರಿಸರ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!