ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಂಗಭೂಮಿ ಸೇವೆಗೆ ಅಪಾರ ಕೊಡುಗೆ : ಬಿ.ಸಿದ್ದಪ್ಪ ಅಭಿಮತ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿರುವ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಶನಿವಾರ ಜರುಗಿದವು.
ಕಲಾವಿದ ಬಿ.ಸಿದ್ದಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಂಗಭೂಮಿ ನಿರಂತರವಾಗಿ ಕಾರ್ಯಗತಗೊಳಿಸಲು ಮತ್ತು ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಕಲೆಗಳನ್ನು ಬೆಳೆಸುವಲ್ಲಿ ಹೇಮೇಶ್ವರರವರ ಪಾತ್ರ ಅತಿ ಮುಖ್ಯವಾಗಿದೆ. ಯಾವಾಗಲೂ ಗ್ರಾಮೀಣ ಭಾಗದ ಜನಪದ, ತತ್ವಪದಗಳು, ಭಾವಗೀತೆಗಳು, ಲಾವಣಿ ಪದಗಳು, ಬಯಲಾಟ, ನಾಟಕ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಯೋಗದಿಂದ ರೋಗ ಮುಕ್ತಿ ಎಲ್ಲರೂ ಪ್ರತಿದಿನ ಯೋಗ, ಧ್ಯಾನ ಕೈಗೊಳ್ಳಬೇಕು. ಅಂದಾಗ ಮಾತ್ರ ಸಮೃದ್ಧ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಕಲಾವಿದ ಜಿ.ಪಾಂಡುರಂಗ ಮಾತನಾಡಿ, ಇಂದಿನ ದಿನಗಳಲ್ಲಿ ಮಕ್ಕಳು ಕಲೆಗಳು ಪರಿಚಯ ಇಲ್ಲದೆ ಇರುವುದು ವಿಪರ್ಯಾಸವಾಗಿದೆ. ಅದಕ್ಕಾಗಿ ಗ್ರಾಮೀಣ ಭಾಗದಲ್ಲಿ ಇಂತಹ ಕಲೆಗಳನ್ನು ಬೆಳಿಸುವ ಕೆಲಸಕ್ಕೆ ಪ್ರತಿಯೊಬ್ಬರ ಸರಕಾರ ಅಗತ್ಯವಾಗಿದೆ ಎಂದರು.
ಸಾಂಸ್ಕೃತಿಕ ಸದಾಶಿವ ಗೌಡ.ಬಿ ಮತ್ತು ತಂಡದವರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಗ್ಗಲ್ ಲೋಕಣ್ಣ ಮತ್ತು ತಂಡದವರು ಯೋಗ ನೃತ್ಯ, ಹೆಚ್.ಲೋಕರಾಜ್ ಮತ್ತು ತಂಡದವರು ಸಮೂಹ ನೃತ್ಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ವೈದ್ಯರಾದ ಡಾ.ಬಸವರಾಜ, ಡಾ.ಪ್ರಹ್ಲಾದ್ ಆರ್.ಐಲಿ, ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಿರಿಯ ಮೇಲ್ವಿಚಾರಕ ಮಾರೇಶ, ಸಮಾಜ ಸೇವಕ ಹೆಚ್.ಪೀರಾವಲಿ, ಕಲಾವಿದರಾದ ಡಿ.ಜಡೀಯಪ್ಪ, ಶರಣ, ಸ್ವಾಮಯ್ಯ, ಬೆಳಗೋಡು ತಿಪ್ಪೇಶ, ಶಂಕರಪ್ಪ, ಚಾನಾಳ ಈರಣ್ಣ, ಬಸವ, ಹಳೆಮನೆ ವಿರೇಶ, ಪಕ್ಕೀರಪ್ಪ, ಜಡೇಶ, ಸಾಧಕಲಿ, ಹೊನ್ನುರಸಾಬ್, ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ಶ್ರೀ ಗುರುಮಹಾಂತೇಶ, ಕಾರ್ಯದರ್ಶಿ ಕುರುಬರ ಹೇಮೇಶ್ವರ, ಖಜಾಂಚಿ ಕೆ.ಹಿಮಂತರಾಜ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!