ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗ : ಶ್ರೀಮತಿ ಲೀಲಾವತಿ

ನಂಜನಗೂಡು : 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಹಬ್ಬವಾಗಿ ನಂಜನಗೂಡು ಪಟ್ಟಣದ ದಳವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಶಾಂತ ವಾತಾವರಣದಲ್ಲಿ ಇಂದು ಬೆಳಿಗ್ಗೆ 7:00 ರಿಂದ 9 ಗಂಟೆ ತನಕ ಸಂಭ್ರಮದಿಂದ ಮಕ್ಕಳು ಶಿಕ್ಷಕರು ಯೋಗ ಮಾಡುವುದರ ಮೂಲಕ ಹಬ್ಬವಾಗಿ ಆಚರಿಸಿದರು. ಯೋಗಭ್ಯಾಸವನ್ನು ಮಕ್ಕಳಿಗೆ ಶಾಲೆಯ ದೈಹಿಕ ಹಾಗೂ ಯೋಗ ಶಿಕ್ಷಕರಾದ ನಾಗೇಶ್ ನಾಯಕ ಅವರು ವೃಕ್ಷಾಸನ, ಪಾದ ಹಸ್ತಾಸನ, ಅರ್ಧ ಚಕ್ರಾಸನ ಮೊದಲಾದ ಹಲವು ಯೋಗಗಳನ್ನು ಮಕ್ಕಳಿಗೆ ಅಭ್ಯಾಸ ಮಾಡಿಸಿದರು.
ಮಕ್ಕಳು ಸಹ ಬಹಳ ಖುಷಿಯಿಂದ, ಉಲ್ಲಾಸಿತರಾಗಿ ಯೋಗಗಳನ್ನು ಅಭ್ಯಾಸ ಮಾಡಿದರು.
ಶಾಲೆಯ ಬಡ್ತಿ ಮುಖ್ಯ ಶಿಕ್ಷಕರಾದ ಶ್ರೀಮತಿ ಲೀಲಾವತಿಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಿದೆ ಬಾಲ್ಯದಿಂದ ಹಿಡಿದು ವೃದ್ದಾಪ್ಯದ ತನಕ ಯೋಗಭ್ಯಾಸವನ್ನು ಮಾಡಬಹುದೆಂದರು. ಬಾಲ್ಯದಿಂದಲೇ ಯೋಗಾಭ್ಯಾಸವನ್ನು ಕಲಿಯುವುದು ಅಭ್ಯಾಸ ಮಾಡುವುದು ತುಂಬಾ ಒಳ್ಳೆಯದು. ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ, ಮನಸು ಶಾಂತವಾಗಿರುತ್ತದೆ, ಯೋಗ ಬಲ್ಲವನಿಗೆ ರೋಗವಿಲ್ಲ, ಬೆಳಿಗ್ಗೆ ಸಂಜೆ ಯೋಗ ಮಾಡುವುದು ತುಂಬಾ ಉಪಯೋಗಕಾರಿಯಾಗಿದೆ ಮಕ್ಕಳು ಯೋಗವನ್ನು ಕಡ್ಡಾಯವಾಗಿ ಪ್ರತಿದಿನ ಅಭ್ಯಾಸ ಮಾಡಬೇಕೆಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!