ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೋಪಾಳದಲ್ಲಿ ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ಆರಂಭ.

ಶಿವಮೊಗ್ಗ: ನಗರದ ಗೋಪಾಳ ಪ್ರದೇಶದಲ್ಲಿ ನಾರಾಯಣ ಹೆಲ್ತ್‌ನ ಎರಡನೇ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ಗೆ ಮಂಗಳವಾರ ಚಾಲನೆ ದೊರೆಯಿತು.

ನಟಿ ಅದಿತಿ ಪ್ರಭುದೇವ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ, ನಾರಾಯಣ ಸಂಸ್ಥೆ ರಾಜ್ಯದಾದ್ಯಂತ ಜನರ ವಿಶ್ವಾಸ ಗಳಿಸಿರುವ ಆರೋಗ್ಯ ಸಂಸ್ಥೆಯಾಗಿದ್ದು, ಶಿವಮೊಗ್ಗದಲ್ಲಿ ಮತ್ತೊಂದು ಕ್ಲಿನಿಕ್ ಆರಂಭಿಸಿರುವುದು ಸಂಸ್ಥೆಯ ಮೇಲಿನ ಜನರ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ವೈದ್ಯರ ಸೇವೆಯನ್ನು ಶ್ಲಾಘಿಸಿದ ಅವರು, ಯಾವುದೇ ಸಂಕಷ್ಟದ ಸಂದರ್ಭದಲ್ಲೂ ವೈದ್ಯರು ತಮ್ಮ ಕುಟುಂಬಕ್ಕಿಂತ ಸೇವೆಗೆ ಆದ್ಯತೆ ನೀಡುತ್ತಾರೆ. “ವೈದ್ಯೋ ನಾರಾಯಣೋ ಹರಿ” ಎಂಬ ಮಾತು ನೂರಕ್ಕೆ ನೂರು ಸತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ್ ಶರ್ಮಾ, ಗೋಪಾಳ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಸುಲಭವಾಗಿ ಆರೋಗ್ಯ ಸೇವೆ ದೊರೆಯುವ ಉದ್ದೇಶದಿಂದ ಕ್ಲಿನಿಕ್ ಆರಂಭಿಸಲಾಗಿದೆ ಎಂದರು. ಉದ್ಘಾಟನಾ ಅಂಗವಾಗಿ ಶಿವಮೊಗ್ಗದ ನಾಗರಿಕರಿಗಾಗಿ ರೂ.1,999ಕ್ಕೆ ಸಮಗ್ರ ಆರೋಗ್ಯ ತಪಾಸಣಾ ಪ್ಯಾಕೇಜ್ ಘೋಷಿಸಲಾಗಿದೆ ಎಂದು ತಿಳಿಸಿದರು.

ನಾರಾಯಣ ಹೆಲ್ತ್ ಸಂಸ್ಥೆಯ ಮಾರ್ಕೆಟಿಂಗ್ ಹಾಗೂ ಗ್ರೋಥ್ ನ ಕ್ಲಸ್ಟರ್ ಮುಖ್ಯಸ್ಥರು ಶ್ರೀ ರಾಜಾಸಿಂಗ್ ಮಾತನಾಡಿ, ಗೋಪಾಳ ಶಿವಮೊಗ್ಗದ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಲ್ಲಿ ಒಂದಾಗಿದ್ದು, ಹೆಚ್ಚಿನ ಸಂಖ್ಯೆಯ ನಿವಾಸಿಗಳು, ವೈದ್ಯರು ಹಾಗೂ ಉದ್ಯಮಿಗಳು ಇಲ್ಲಿ ವಾಸವಾಗಿದ್ದಾರೆ. ಅವರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಮನೆ ಸಮೀಪವೇ ಒದಗಿಸುವ ಉದ್ದೇಶದಿಂದ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ಹೇಳಿದರು.

ಕ್ಲಿನಿಕ್‌ನಲ್ಲಿ ಎಕ್ಸ್-ರೇ, ಎಕೋ, ಟಿಎಂಟಿ, ರಕ್ತ ಪರೀಕ್ಷೆ ಮಾದರಿ ಸಂಗ್ರಹ, ಫಾರ್ಮಸಿ, ಫಿಸಿಯೋಥೆರಪಿ ಹಾಗೂ ವಿವಿಧ ತಜ್ಞ ವೈದ್ಯರ ಸಲಹೆ ಸೇರಿದಂತೆ ಹಲವು ಆರೋಗ್ಯ ಸೇವೆಗಳು ಒಂದೇ ಸೂರಿನಡಿ ಲಭ್ಯವಿವೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ವೈದ್ಯ ಡಾ. ಎನ್. ಎಲ್ .ನಾಯ್ಕ್ ಅವರಿಗೆ ಸನ್ಮಾನ ಮಾಡಲಾಯಿತು.ಡಾ. ಚೇತನ್ ಎಂ. ಎಲ್, ನಾರಾಯಣ ಹೆಲ್ತ್ ನ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಶ್ರೀ ಸಂತ ಕುಮಾರ, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶ್ರೀ ಶೈಲೇಶ್ ಎಸ್. ಎನ್ ಸೇರಿದಂತೆ, ಆಸ್ಪತ್ರೆ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!