ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಸಂಭ್ರಮದ ಗಂಗಾದೇವಿ ಜಯಂತ್ಯೋತ್ಸವ

ಬಳ್ಳಾರಿ / ಕಂಪ್ಲಿ : ಗಂಗಾಮತ ಸಮಾಜವೂ ಶಿಕ್ಷಣ ಸೇರಿದಂತೆ ನಾನಾ ರಂಗದಲ್ಲಿ ಹಿಂದುಳಿದ್ದು, ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಂಗಾಮತಸ್ಥರ ಕಡೆಗೆ ಹೆಚ್ಚಿನ ಗಮನ ಹರಿಸಿ, ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡ(ಎಸ್.ಟಿ)ಕ್ಕೆ ಸೇರಿಸಬೇಕೆಂದು ಕಂಪ್ಲಿ ತಾಲೂಕು ಗಂಗಾಮತ ಸಮಾಜದ ಅಧ್ಯಕ್ಷ ಎಲೆಗಾರ ನಾಗರಾಜ ಒತ್ತಾಯಿಸಿದರು.
ಪಟ್ಟಣದಲ್ಲಿರು ಗಂಗಾಮತ ಸಮಾಜದ ಸಮುದಾಯ ಭವನದಲ್ಲಿ ಬುಧವಾರ ಗಂಗಾಮತ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಸಂಭ್ರಮದ ಗಂಗಾದೇವಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಸಮಾಜವು ಹಿಂದುಳಿದೆ. ಮತ್ತು ಸರ್ಕಾರದ ಸೌಲಭ್ಯಗಳು ಅಷ್ಟಕಷ್ಟೇ ಎಂಬಂತಿದೆ ಆದ್ದರಿಂದ ಎಸ್.ಟಿ ಮೀಸಲಾತಿ ನೀಡಿದರೆ, ಸಮಾಜದ ಅಭಿವೃದ್ಧಿ ಸಾಧ್ಯ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಂಗಾಮಾತೆಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಂಗಾಮತ ಸಮಾಜದವರು ಮಕ್ಕಳಿಗೆ ತಪ್ಪದೇ ಶಿಕ್ಷಣ ಮತ್ತು ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಸಮಾಜ ಅಭಿವೃದ್ಧಿಯೊಂದಿಗೆ ಬದವಾಣೆ ಹೊಂದಲು ಸಾಧ್ಯ ಎಂದರು.

ಮೊದಲಿಗೆ ತುಂಗಭದ್ರಾ ನದಿ ತಟದಲ್ಲಿರುವ ಆರಾಧ್ಯ ದೇವತೆ ಗಂಗಾದೇವಿ ದೇವಸ್ಥಾನದಲ್ಲಿ ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಇಲ್ಲಿನ ಸಮುದಾಯ ಭವನದಲ್ಲಿರುವ ಗಂಗಾದೇವಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಜಯಂತ್ಯೋತ್ಸವ ವಿಜೃಂಭಣೆಯಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕರೇಕಲ್ ಪ್ರಕಾಶ್, ಬಿ.ಸಿದ್ದಪ್ಪ, ಕರೇಕಲ್ ಮನೋಹರ್, ಈರಪ್ಪ, ಬಿ.ಈರಪ್ಪ, ಕೆ.ಬಿ.ವೀರಭದ್ರಪ್ಪ, ಯು.ವಿರುಪಣ್ಣ, ಬಿ. ರಮೇಶ, ನಡವಿ ಮಲ್ಲಿಕಾರ್ಜುನ, ಟಿ.ಮಲ್ಲಿಕಾರ್ಜುನ, ಟಿ.ಗಂಗಣ್ಣ, ಅಯೋದಿ ರಮೇಶ್, ಇಟಗಿ ವಿರುಪಾಕ್ಷಿ, ಡಿ.ರಮೇಶ್, ಸಣ್ಯಪ್ಪ, ವೀರೇಶ್, ಎಸ್.ಸುರೇಶ್, ಸುಣಗಾರ ಮಹೇಶ್, ಇಟಗಿ ಈರಣ್ಣ, ಅಯೋದಿ ವೆಂಕಟೇಶ್, ಆನೆಗುಂದಿ ತಾಯಣ್ಣ, ಜಂಗಾ ವೀರೇಶ್, ಬಸವರಾಜ, ಮಂಜುನಾಥ್, ಜಿ.ಯಲ್ಲಪ್ಪ, ಅರವಿಂದ, ಬೆಂಕೆಪ್ಪ, ಶರಣ, ಪರಶಪ್ಪ, ಮಲ್ಲಯ್ಯ ಸೇರಿದಂತೆ ಸಮಾಜದವರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!