ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಎ. ಎಸ್ .ಪೊನ್ನಣ್ಣರವರ ಗೃಹ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ವಿರಾಜಪೇಟೆ :ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶೃದ್ದೆಯಿಂದ ಆಚರಿಸಿದರು.
ಗೃಹ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಮಾನ್ಯ ಶಾಸಕರು, ಬೆಂಗಳೂರು ನಗರದ ಆಧುನಿಕತೆಗೆ ಮೆರಗು ನೀಡುವಂತಹ ಸೊಬಗನ್ನು ಅಂದಿನ ಕಾಲದಲ್ಲಿ ಕೆಂಪೇಗೌಡರು ಕನಸು ಕಂಡಿದ್ದರು. ಸೌಹಾರ್ದ ನಾಡು, ಸಮೃದ್ಧ ನಾಡಿಗಾಗಿ ಬೆಂಗಳೂರು ನಗರವನ್ನು ನಿರ್ಮಿಸಿದ ಕೆಂಪೇಗೌಡರು ಇಂದು ಕರ್ನಾಟಕದ ರಾಜ್ಯಧಾನಿಯಾಗಿ ಜಾಗತಿಕ ವಲಯದಲ್ಲಿ ಬೆಂಗಳೂರಿಗೆ ಹೆಸರು ಬರುವಂತಾಗಿದೆ. ಕೆಂಪೇಗೌಡರ ಜೀವನ ನಮಗೆಲ್ಲರಿಗೂ ಮಾದರಿಯಾಗಿದೆ. ಕೆಂಪೇಗೌಡರ ದೂರದೃಷ್ಟಿ, ತ್ಯಾಗ ಹಾಗೂ ಕಠಿಣ ಪರಿಶ್ರಮವನ್ನು ನಾವೆಲ್ಲರೂ ಪಾಲಿಸಿಕೊಂಡಲ್ಲಿ ಉತ್ತಮ ನಾಡು ನಿರ್ಮಾಣ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಮಾಜಿ ಪುರಸಭೆ ಸದಸ್ಯರು ರಾಜೇಶ್ ಪದ್ಮನಾಭ, ತಾಲೂಕು ಕೆ ಡಿ ಪಿ ಸದಸ್ಯರು ರಫೀಕ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಕ್ಷಿತ್ ಚಂಗಪ್ಪ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯರು ಆಲಿರ ರಶೀದ್, ಪಕ್ಷದ ಮುಖಂಡರು ಸೂರಜ್ ಹೊಸೂರು, ಅಜ್ಜಿಕುಟ್ಟಿರ ಗಿರೀಶ್, ಕುಂಡಚ್ಚಿರ ಮಂಜು ದೇವಯ್ಯ, ಬಟ್ಟಕಾಳಂಡ ರಾಜ ದಿನೇಶ್, ಕೆಟೊಳಿ ಮೋಹನ್ ರಾಜ್, ವರ್ಗಿಸ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!