ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಅನಧಿಕೃತವಾಗಿ ಸಾರಾಯಿ ಮಾರಾಟ ನಡೆಯುತ್ತಿರುವುದನ್ನು ತಕ್ಷಣವೇ ತಡೆಗಟ್ಟುವಂತೆ ಆಗ್ರಹಿಸಿ, ಯುವ ಕ್ರಾಂತಿ ಸಂಘಟನೆಯ ವತಿಯಿಂದ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮದಲ್ಲಿ ಅನಧಿಕೃತ ಸಾರಾಯಿ ಮಾರಾಟದಿಂದ ಯುವಜನತೆ ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಸಾಮಾಜಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಅನಧಿಕೃತ ಸಾರಾಯಿ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಈ ಅಕ್ರಮವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕ್ರಾಂತಿ ಸಂಘಟನೆಯ ಮಂಠಾಳ ಘಟಕದ ಅಧ್ಯಕ್ಷರಾದ ಸಂದೀಪ್ ಪಾಟೀಲ, ವೀರೇಶ್ ಗುಡ್ಡಾ ಮಹೇಶ್ ಜಾಧವ್ , ಅಂಕುಶ್ ದರೆ ,ಮಹೇಶ್ ಬಿರಾದಾರ ,ಆದೇಶ್ ಸುಣಗಾರ ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಶ್ರೀನಿವಾಸ ಬಿರಾದಾರ




















