ಬೈಲಹೊಂಗಲ :ಮುಂಗಾರು ಮಳೆ ಪ್ರಾರಂಭದ ದಿನಗಳಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೈಲಹೊಂಗಲ ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಠಿಯಿಂದ ನೀರನ್ನು ಕಾಯಿಸಿ ಆರಿಸಿ ಕುಡಿಯುವುದು ಮತ್ತು ಮನೆಗಳಲ್ಲಿನ ಎಲ್ಲಾ ನೀರಿನ ತೊಟ್ಟಿಗಳು (ನೀರಿನ ಟ್ಯಾಂಕ್), ಡ್ರಂ, ಬ್ಯಾರಲ್ಗಳು, ಏರ್ ಕೂಲರ್ ಇತ್ಯಾದಿಗಳನ್ನು ವಾರಕೊಮ್ಮೆ ಖಾಲಿ ಮಾಡಿ ಸ್ವಚ್ಛಪಡಿಸಿ, ಮತ್ತೆ ಭರ್ತಿ ಮಾಡಿಕೊಂಡು ಮುಚ್ಚಳದಿಂದ ಮುಚ್ಚುವುದು, ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು ಹಾಗೂ ನಗರಸಭೆಯಿಂದ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡಲು ಮತ್ತು ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಲು ಮತ್ತು ರೋಗದ ಲಕ್ಷಣ ಕಂಡೊಡನೆ ವೈದ್ಯರಿಂದ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಪೌರಾಯುಕ್ತರಾದ ಶ್ರೀಮತಿ ಭಾಗ್ಯಶ್ರೀ ಆರ್. ಹುಗ್ಗಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವರದಿ ಮಂಜು ಎಂ.ಚಿಕ್ಕಣ್ಣವರ




















