ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಣದ ಜೊತೆಗೆ ಸಂಸ್ಕಾರವಂತರಾಗಲು ಮುತ್ತಪ್ಪ ಬಳಿಗಾರ ವಿದ್ಯಾರ್ಥಿಗಳಿಗೆ ಕರೆ

ಹುನಗುಂದ : ಮಕ್ಕಳ ಸುಂದರ ಬದುಕಿಗೆ ಶಿಕ್ಷಣ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ, ಜೊತೆಗೆ ಒಳ್ಳೆಯ ಸಂಸ್ಕಾರ ಪಡೆಯುವ ಮೂಲಕ ಸುಂದರ ಬದುಕು ರೂಪಿಸಿಕೊಳ್ಳಬೇಕು ಎಂದು ತಾಲೂಕಿನ ನಾಗೂರ ಎಸ್ ಡಿ ಎಂ ಸಿ ಸದಸ್ಯ ಮುತ್ತಪ್ಪ ಬಳಿಗಾರ ಹೇಳಿದರು.
ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್ ವಿತರಿಸಿ ಮಾತನಾಡಿದರು.
ದಾನಿಗಳ ಹಣದಿಂದ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸುತ್ತಿರುವುದು ಉತ್ತಮ ಕಾರ್ಯ. ಇದೇ ಸಂದರ್ಭದಲ್ಲಿ ಅಡಿಯಪ್ಪ ಹುಚ್ನೂರ ಇವರು ಪ್ರತಿದಿನ ಮಕ್ಕಳಿಗೆ ಒಂದು ಶರಣರ ವಚನಗಳನ್ನು ಕಲಿಸುತ್ತಿರುವುದು ಒಳ್ಳೆಯ ಕೆಲಸ ಎಂದರು. ನೋಟ್‌ಬುಕ್ ದಾನಿ ಅಡಿಯಪ್ಪ ಹುಚ್ನೂರ ಮಾತನಾಡಿ, ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಗ್ರಾಮದ ಪ್ರತಿಯೊಬ್ಬರ ಸಹಕಾರ ಮತ್ತು SDMC ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರ ಬಹು ಮುಖ್ಯ ಎಂದರು.
SDMC ಉಪಾಧ್ಯಕ್ಷ ಗಂಗಮ್ಮ ಹುಚನೂರ ಸೇರಿದಂತೆ ಎಸ್‌ಡಿಎಂಸಿ ಸದಸ್ಯರಾದ ಅಮರಗೌಡ ಪಾಟೀಲ ಅಂದಾನಸ್ವಾಮಿ ಗುಡದೂರಕಲಮಠ ಆರ್. ಚನ್ನದಾನಿ, ಹಿರಿಯಣ್ಣ ರಾಮಶಟ್ಟಿ ದೊಡ್ಡಪ್ಪ ಕುರಿ ಬರಮಗೌಡ ಪಾಟೀಲ ಮುಖ್ಯ ಗುರುಗಳಾದ ಬಸವರಾಜ ಭಜಂತ್ರಿ, ಶಾಲಾ ಸಿಬ್ಬಂದಿ ಸೇರಿದಂತೆ ಗ್ರಾಮದ ಪ್ರಮುಖರು ಭಾಗವಹಿಸಿದ್ದರು.
ಮೇಟಿ ಗುರುಗಳು ನಿರೂಪಿಸಿದರು

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!