ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಳಕು ಸಾಹಿತ್ಯಕ ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್‌ನ ಬೆಳಕು ಸಮ್ಮೇಳನ ನಾಡಿದ್ದು

ಹುಬ್ಬಳ್ಳಿ : ಕಳೆದ ಒಂದು ದಶಕದಿಂದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಆದಂತಹ ವಿಭಿನ್ನ, ವಿನೂತನವಾಗಿ ರಾಜ್ಯದ 31 ಜಿಲ್ಲೆಗಳಲ್ಲಿ ಹಾಗೂ ವಿವಿಧ ರಾಜ್ಯಗಳಲ್ಲಿಯೂ ಕಾರ್ಯಕ್ರಮಗಳನ್ನು ಮಾಡುತ್ತಾ ಎಲೆಮರೆಕಾಯಿಯಂತಿರುವ ಪ್ರತಿಭೆಗಳನ್ನು ಬೆಳೆಸಲು, ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕಾರ್ಯ ಮಾಡುತ್ತಾ ಇದೀಗ ಬೆಳಕು ಸಂಸ್ಥೆ ವತಿಯಿಂದ 125ನೇ ಕಾರ್ಯಕ್ರಮ “ಬೆಳಕು ಸಮ್ಮೇಳನ”ವನ್ನು ಜುಲೈ 12, 2026ರಂದು ಭಾನುವಾರ ಮುಂಜ9.30 ರಿಂದ ಸಂಜೆ 7ಗಂಟೆಯವರಿಗೆ ಹುಬ್ಬಳ್ಳಿ ನಗರದಲ್ಲಿರುವ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.

ಸಮ್ಮೇಳನದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳ ಜೊತೆಗೆ ಪ್ರಶಸ್ತಿ ಪ್ರದಾನ ಮತ್ತು ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ವಿಶೇಷವಾಗಿ ಹಿಂದಿನ ಸಾಹಿತ್ಯ ದೀಪ, ಇಂದಿನ ಸಾಹಿತ್ಯ ಕನ್ನಡಿ ಎನ್ನುವ ವಿಷಯದ ಕುರಿತು ಸವಾಲು -ಜವಾಬು ಎನ್ನುವ ವಿಚಾರ ಗೋಷ್ಠಿ, ಕವಿಗೋಷ್ಠಿ, ಗಾಯನ, ನೃತ್ಯ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ.

ಅಖಿಲ ಭಾರತ ಶಿಕ್ಷಕರ ಫೆಡರೇಶನ್ (ನವದೆಹಲಿ) ರಾಷ್ಟ್ರೀಯ ಅಧ್ಯಕ್ಷರಾದ ಬಸವರಾಜ್ ಗುರಿಕಾರ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿಗಳಾದ ಶಿವರುದ್ರಯ್ಯ ವಿ.ವಿ. ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಸಚಿವರು ಹಾಗೂ ಹಿರಿಯ ಸಾಹಿತಿಗಳಾದ ಲೀಲಾದೇವಿ ಆರ್. ಪ್ರಸಾದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ವಾಣಿಜ್ಯ ತೆರಿಗೆಗಳ ಮೇಲ್ಮನವಿ ವಿಭಾಗದ ಜಂಟಿ ಆಯುಕ್ತರಾದ ಸುಜಾತಾ ಕೆ.ಸಿ.ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ಸಂಘಟನಾ ನುಡಿಯನ್ನು ಸಾಹಿತಿ ಹಾಗೂ ಬೆಳಕು ಸಂಸ್ಥೆಯ ಮಹಿಳಾ ಘಟಕದ ಗೌರವಾಧ್ಯಕ್ಷರಾದ ಡಾ. ನಿರ್ಮಲಾ ಸಿ. ಯಲಿಗಾರ್ ನೀಡಲಿದ್ದಾರೆ, ಬೆಳಕು ಟ್ರಸ್ಟ್ ಸಂಸ್ಥಾಪಕನಾದ ನಾನು ಅಣ್ಣಪ್ಪ ಮೇಟಿಗೌಡ ಪ್ರಾಸ್ತಾವಿಕವಾಗಿ ಮಾತನಾಡಲಿದ್ದೇನೆ ಕಾರ್ಯಕ್ರಮ ಅದ್ದೂರಿಯಿಂದ ಸಾಹಿತ್ಯವಾಗಿ ಸಾಂಸ್ಕೃತಿಕವಾಗಿ ಶೈಕ್ಷಣಿಕವಾಗಿ ನಡೆಯುತ್ತಿರುವುದರಿಂದ ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!