ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುಣಮಟ್ಟದ ಶಿಕ್ಷಣದ ಮಾದರಿ – ಡಾ. ಚನ್ನಬಸವ ಪಟ್ಟದ್ದೇವರು

ಶಿಕ್ಷಣ ಎಂದರೆ ಕೇವಲ ಅಕ್ಷರ ಕಲಿಯುವುದಲ್ಲ. ಅದು ಬದುಕನ್ನು ರೂಪಿಸುವುದು, ಸಂಸ್ಕಾರ ನೀಡುವುದು, ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ಕೊಡುವುದು. ಈ ಆದರ್ಶವನ್ನು ನಿಜವಾಗಿಸುವ ಒಂದು ಸಂಸ್ಥೆಯ ಹೆಸರೇ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ (ರಿ.) ಭಾಲ್ಕಿಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ. ಚನ್ನಬಸವ ಪಟ್ಟದ್ದೇವರು ಗುರುಕುಲ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಕಂದಗೋಳ, ತಾಲೂಕು ಚಿಟಗುಪ್ಪಾ, ಬೀದರ್ ಜಿಲ್ಲೆ.

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕಂದಗೋಳ ಗ್ರಾಮದಲ್ಲಿರುವ ಈ ಶಾಲೆ ಇಂದು ಜಿಲ್ಲೆಯಲ್ಲಿಯೇ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಗ್ರಾಮೀಣ ಭಾಗದಲ್ಲಿದ್ದರೂ ನಗರದ ಪ್ರತಿಷ್ಠಿತ ಶಾಲೆಗಳಿಗೆ ಸರಿಸಮವಾಗಿ ನಿಂತು, ತನ್ನ ಸಾಧನೆಯಿಂದ ಎಲ್ಲರ ಗಮನ ಸೆಳೆದಿದೆ.

ಈ ಶಾಲೆಯ ಅತಿದೊಡ್ಡ ಶಕ್ತಿ ಎಂದರೆ ಅದರ ಶಿಸ್ತು. ಬೆಳಿಗ್ಗೆ ಪ್ರಾರ್ಥನೆಯಿಂದ ಹಿಡಿದು ಸಂಜೆ ತರಗತಿ ಮುಗಿಯುವವರೆಗೆ ಪ್ರತಿಯೊಂದು ಕೆಲಸವೂ ಕ್ರಮಬದ್ಧವಾಗಿ ನಡೆಯುತ್ತದೆ. ಮಕ್ಕಳಲ್ಲಿ ಸಮಯಪಾಲನೆ, ಶುಚಿತ್ವ, ಗೌರವ, ಸಹಕಾರದಂತಹ ಮೌಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಬೆಳೆಸಲಾಗುತ್ತದೆ. ಶಿಕ್ಷಣದ ಜೊತೆಗೆ ಸಂಸ್ಕಾರಕ್ಕೆ ಸಮಾನ ಪ್ರಾಮುಖ್ಯತೆ ನೀಡುವುದರಿಂದ ಇಲ್ಲಿನ ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವ ಯಂತ್ರಗಳಾಗದೆ, ಮಾನವೀಯ ಮೌಲ್ಯಗಳನ್ನು ಹೊಂದಿದ ವ್ಯಕ್ತಿಗಳಾಗಿ ಬೆಳೆಯುತ್ತಿದ್ದಾರೆ.

ಶೈಕ್ಷಣಿಕ ಗುಣಮಟ್ಟದ ವಿಷಯದಲ್ಲಿ ಈ ಶಾಲೆ ರಾಜ್ಯಕ್ಕೇ ಮಾದರಿ. ನುರಿತ ಮತ್ತು ಅನುಭವಿ ಶಿಕ್ಷಕ-ಶಿಕ್ಷಕಿಯರ ತಂಡ ಇಲ್ಲಿದೆ. ಪಾಠ ಕೇವಲ ಪುಸ್ತಕಕ್ಕೆ ಸೀಮಿತವಾಗದೆ, ವೈಚಾರಿಕ ಪ್ರಜ್ಞೆ ಮೂಡಿಸುವ ನೀತಿ ಪಾಠಗಳು, ಚರ್ಚೆಗಳು, ಪ್ರಶ್ನೋತ್ತರಗಳ ಮೂಲಕ ನಡೆಯುತ್ತದೆ. ಇದರ ಫಲವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸತತವಾಗಿ ನೂರಕ್ಕೆ ನೂರು ಫಲಿತಾಂಶ ದಾಖಲಿಸುವ ಮೂಲಕ ಶಾಲೆ ಹೆಮ್ಮೆಯ ಸಾಧನೆ ಮಾಡಿದೆ. ಇದು ಕೇವಲ ಫಲಿತಾಂಶವಲ್ಲ, ಶಿಕ್ಷಕರ ಶ್ರಮ, ಮಕ್ಕಳ ಪರಿಶ್ರಮ ಮತ್ತು ಆಡಳಿತ ಮಂಡಳಿಯ ದೂರದೃಷ್ಟಿಯ ಫಲವಾಗಿದೆ.

ಶೈಕ್ಷಣಿಕ ಜೊತೆಗೆ ಸಹಶೈಕ್ಷಣಿಕ ಚಟುವಟಿಕೆಗಳಿಗೂ ಇಲ್ಲಿ ಹೆಚ್ಚಿನ ಒತ್ತು. ವರ್ಷವಿಡೀ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ, ಭಾಷಣ ಸ್ಪರ್ಧೆ, ನಾಟಕ, ಹಾಡುಗಳನ್ನು ಸಂಯೋಜಿಸಲಾಗುತ್ತದೆ. ಇದರಿಂದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರಬರುತ್ತದೆ. ಕ್ರೀಡಾ ಕ್ಷೇತ್ರದಲ್ಲೂ ಶಾಲೆ ಹಿಂದೆ ಇಲ್ಲ. ಜಿಲ್ಲಾ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಈ ಶಾಲೆಯ ಮಕ್ಕಳು ಭಾಗವಹಿಸಿ ಬಹುಮಾನ ಗೆಲ್ಲುತ್ತಿದ್ದಾರೆ.

ವಿಶೇಷವಾಗಿ ಬೇಸಿಗೆ ರಜಾದಲ್ಲಿಯೂ ಮಕ್ಕಳನ್ನು ಮನೆಯಲ್ಲಿ ಸುಮ್ಮನೆ ಬಿಡದೆ ತರಬೇತಿ ಶಿಬಿರಗಳನ್ನು ಆಯೋಜಿಸುವುದು ಈ ಶಾಲೆಯ ವಿಶಿಷ್ಟತೆ. ಈ ಶಿಬಿರಗಳಲ್ಲಿ ಪಠ್ಯದ ಜೊತೆಗೆ ಯೋಗ, ಚಿತ್ರಕಲೆ, ವಚನ ಪಠಣ, ಕಂಪ್ಯೂಟರ್ ತರಬೇತಿಯಂತಹ ವಿಷಯಗಳನ್ನು ಕಲಿಸಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗಿದೆ.

ಈ ಎಲ್ಲಾ ಸಾಧನೆಗಳ ಹಿಂದೆ ದೊಡ್ಡ ಪ್ರೇರಣಾ ಶಕ್ತಿಯಿದೆ. ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಮತ್ತು ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರ ದೂರದೃಷ್ಟಿ, ಪ್ರೋತ್ಸಾಹ ಮತ್ತು ಆಶೀರ್ವಾದವೇ ಈ ಶಾಲೆಯ ಬೆಳವಣಿಗೆಗೆ ಮೂಲ ಕಾರಣ. ಅವರ ಮಾರ್ಗದರ್ಶನದಲ್ಲಿ ಹಿರೇಮಠ ಸಂಸ್ಥಾನವು ಶಿಕ್ಷಣವನ್ನು ಸೇವೆಯಾಗಿ ಸ್ವೀಕರಿಸಿ, ಬಡ-ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮಹತ್ಕಾರ್ಯ ಮಾಡುತ್ತಿದೆ.

ಇದರ ಜೊತೆಗೆ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ರೇಖಾ ಮಂಜುನಾಥ ಅವರ ಕಾಯಕ ನಿಷ್ಠೆ ಎಲ್ಲರಿಗೂ ಮಾದರಿಯಾಗಿದೆ. ಅವರ ನೇತೃತ್ವದಲ್ಲಿ ಎಲ್ಲ ಶಿಕ್ಷಕ-ಶಿಕ್ಷಕಿಯರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು ಜ್ಞಾನಾರ್ಜನೆಗೆ ಪ್ರೇರೇಪಿಸುತ್ತಿದ್ದಾರೆ. ಪೋಷಕರ ವಿಶ್ವಾಸ ಗಳಿಸುವಲ್ಲಿ ಮತ್ತು ಸಮಾಜದ ಸಹಕಾರ ಪಡೆಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ.

ಕಂದಗೋಳದ ಈ ಗುರುಕುಲ ಶಾಲೆ ಇಂದು ಬೀದರ ಜಿಲ್ಲೆಗೆ ಮಾತ್ರವಲ್ಲ, ಇಡೀ ಕರ್ನಾಟಕ ರಾಜ್ಯಕ್ಕೆ ಮಾದರಿಯಾಗಿದೆ. ಗ್ರಾಮೀಣ ಪ್ರದೇಶದಲ್ಲೂ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂಬುದನ್ನು ಈ ಶಾಲೆ ತೋರಿಸಿಕೊಟ್ಟಿದೆ.

ಭವಿಷ್ಯದಲ್ಲಿ ಈ ಶಾಲೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ಇನ್ನೂ ಹೆಚ್ಚಿನ ಮಕ್ಕಳು ಇಲ್ಲಿ ವಿದ್ಯೆ ಕಲಿತು, ಉತ್ತಮ ಪ್ರಜೆಗಳಾಗಿ ದೇಶಕ್ಕೆ ಕೀರ್ತಿ ತರಲಿ. ಹಿರೇಮಠ ಸಂಸ್ಥಾನದ ಈ ಸೇವೆಗೆ ನಮ್ಮ ಶುಭ ಹಾರೈಕೆಗಳು. ಬಸವ ತತ್ವದ “ಕಾಯಕವೇ ಕೈಲಾಸ” ಎಂಬ ಸಂದೇಶವನ್ನು ಈ ಶಾಲೆ ನಿಜವಾಗಿಸಿದೆ.

ಲೇಖಕರು: ಸಂಗಮೇಶ ಎನ್ ಜವಾದಿ,
ಬರಹಗಾರರು, ಪತ್ರಕರ್ತರು, ಚಿಂತಕರು, ಪರಿಸರ ಸಂರಕ್ಷಕರು, ಬೀದರ್ ಜಿಲ್ಲೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!