ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿವಮೊಗ್ಗ : ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

ಶಿವಮೊಗ್ಗ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ಶಿವಮೊಗ್ಗ ನಗರದಲ್ಲಿ ನೂತನ “ಆಡಳಿತ ಸೌಧ” ನಿರ್ಮಾಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಕೆ. ಗೌಡರವರು ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಸಚಿವರ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿದ ಚೇತನ್ ಕೆ. ಗೌಡ ಅವರು, ಈ ಮಹತ್ವದ ಯೋಜನೆಗೆ ಶೀಘ್ರವಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಬೇಕಾಗಿ ವಿನಂತಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ಸವಿಸ್ತಾರವಾದ ಯೋಜನಾ ವರದಿ (DPR) ಹಾಗೂ ಪೂರಕ ದಾಖಲೆಗಳ ಪ್ರತಿಗಳನ್ನು ಇದೇ ಸಂದರ್ಭದಲ್ಲಿ ಸಚಿವರಿಗೆ ಹಸ್ತಾಂತರಿಸಲಾಯಿತು.

ಪ್ರಸ್ತುತ ಶಿವಮೊಗ್ಗ ನಗರದ ಹಲವು ಪ್ರಮುಖ ಸರ್ಕಾರಿ ಕಚೇರಿಗಳು ಖಾಸಗಿ ಮಾಲೀಕತ್ವದ ಕಟ್ಟಡಗಳಲ್ಲಿ ಬಾಡಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿವೆ. ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆಯನ್ನು ಸರ್ಕಾರವೇ ಭರಿಸಬೇಕಾಗಿದ್ದು, ಬೊಕ್ಕಸಕ್ಕೆ ಅನಗತ್ಯ ಆರ್ಥಿಕ ಹೊರೆಯಾಗಿದೆ. ಅಷ್ಟೇ ಅಲ್ಲದೆ, ಈ ಕಚೇರಿಗಳು ನಗರದ ವಿವಿಧೆಡೆ ಹರಿದು ಹಂಚಿಹೋಗಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಒಂದೇ ದಿನದಲ್ಲಿ ವಿವಿಧ ಇಲಾಖೆಗಳ ಕೆಲಸಗಳನ್ನು ಮುಗಿಸಿಕೊಳ್ಳಲು ತೀವ್ರ ಪರದಾಡುವಂತಾಗಿದೆ.

ನೂತನ ಆಡಳಿತ ಸೌಧ ನಿರ್ಮಾಣಕ್ಕಾಗಿ ಗುರುತಿಸಲಾಗಿರುವ ಜಾಗವು ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರದಲ್ಲಿದೆ. ಇದು ಜಿಲ್ಲೆಯ ವಿವಿಧ ಭಾಗಗಳಿಂದ ಬರುವ ಜನಸಾಮಾನ್ಯರಿಗೆ ಅತ್ಯಂತ ಸುಲಭವಾಗಿ ತಲುಪಲು ಯೋಗ್ಯವಾದ ಕೇಂದ್ರ ಸ್ಥಾನವಾಗಿದೆ. ಈ ಯೋಜನೆಯು ಜಾರಿಗೆ ಬಂದರೆ ಸಾರ್ವಜನಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗುವುದರ ಜೊತೆಗೆ ಸರ್ಕಾರದ ಆರ್ಥಿಕ ಹೊರೆಯೂ ತಪ್ಪಲಿದೆ ಎಂದು ಮಾನ್ಯ ಸಚಿವರಿಗೆ ಮಾಹಿತಿ ನೀಡಲಾಗಿದೆ. ಈ ಮಹತ್ವದ ಯೋಜನೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರ್ಕಾರದ ವತಿಯಿಂದ ಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎಸ್ ಸಿ-ಎಸ್ ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿರವರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!