ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಣಾಪುರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಫಸಲ್ ಭೀಮಾ ಬೆಳೆ ವಿಮೆ ಬಗ್ಗೆ ರೈತರಿಗೆ ಜಾಗೃತಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ರೈತರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಕೇಂದ್ರ ಸರ್ಕಾರದ ಅತೀಮುಖ್ಯ ಕಾರ್ಯಕ್ರಮವಾದ ಫಸಲ್ಭೀಮಾ ಯೋಜನೆನೊಂದಾವಣೆ ಬಗ್ಗೆ ಸ್ಥಳೀಯ ಸ್ವ-ಸಹಾಯ, ಸಂಘದವರಿಗೆ ಹಾಗೂ ರೈತರಿಗೆ ಬೆಳೆ ವಿಮೆ ಮಾಡಲು ಗ್ರಾಮಾಭಿವೃದ್ಧಿ ಯೋಜನೆಯವರು ಮಾಹಿತಿ ನೀಡುವ ಜೊತೆಗೆ ರೈತರಲ್ಲಿ ಜಾಗೃತಿ ಮೂಡಿಸಿದರು.
2026-27 ನೇ ಸಾಲಿನಲ್ಲಿ ಈಗಾಗಲೇ ಬೆಳೆ ವಿಮೆಯನ್ನು ನೋಂದಾವಣೆ ಮಾಡಲು ಆರಂಭವಾಗಿದ್ದು ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ರೈತರು ಬೆಳೆದಬೆಳೆಗಳಿಗೆ ಅತಿವೃಷ್ಟಿ, ಅನಾವೃಷ್ಟಿ, ಕೀಟಬಾಧೆ ಇತರೆ ಸಮಸ್ಯೆಯಿಂದಾಗಿ ಬೆಳೆಗಳಿಗೆ ಹಾನಿ ಉಂಟಾದಲ್ಲಿ ಕೇಂದ್ರ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ದೊರೆಯುವುದರ ಬಗ್ಗೆ ಮಾಹಿತಿ ನೀಡಲಾಯಿತು. ಈಗಾಗಲೇ ತಾಲೂಕಿನಲ್ಲಿ ಸುಮಾರು 150 ಹೆಚ್ಚು ರೈತರು ಬೇರೆ ಬೇರೆ ರೀತಿಯ ಬೆಳೆಗಳಿಗೆ ನೊಂದಾವಣೆ ಮಾಡಿಸಿರುತ್ತಾರೆ. ಇನ್ನು ಹೆಚ್ಚಿನ ರೈತರು ನೊಂದಾವಣೆ ಮಾಡಿಕೊಳ್ಳಬೇಕಾದರೆ ನಿಮ್ಮ ಗ್ರಾಮದಲ್ಲಿ ಇರುವ ಧರ್ಮಸ್ಥಳ ಸಂಸ್ಥೆ ಸೇವಾ ಕೇಂದ್ರ ಕಾಮನ್ ಸರ್ವಿಸ್ ಸೆಂಟರ್ (ಸಿಎಸ್‌ಇ) ಗಳಲ್ಲಿ ನೋಂದಾವಣೆ ಮಾಡಲಾಗುತ್ತಿದೆ. ಆಸಕ್ತಿ ಹೊಂದಿರುವ ರೈತರು ಸೇವಾ ಕೇಂದ್ರಕ್ಕೆ ಭೇಟಿ ನೀಡಿ, ಸರಿಯಾದ ದಾಖಲಾತಿಗಳೊಂದಿಗೆ ನೋಂದಣಿ ಮಾಡಿಸಬಹುದು ಎಂದು ಮಾಹಿತಿ ನೀಡಿದರಲ್ಲದೆ, ಸರ್ಕಾರದ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.
ಜಾಗೃತಿ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆಯ ಕೃಷಿ ಅಧಿಕಾರಿಗಳಾದ ಸಂಜುಕುಮಾರ್, ತಾಲೂಕು ಸಿಎಸ್‌ಸಿ ನೋಡಲ್ ಅಧಿಕಾರಿಗಳಾದ ಸೋಮಶೇಖರ್ ಸಿ, ಗ್ರಾಮದ ರೈತರಾದ ಶರಬನಗೌಡ, ಚನ್ನವೀರಗೌಡ, ಎ.ಕೆ.ವೀರೇಶಪ್ಪ, ಸೇವಾ ಪ್ರತಿನಿಧಿ ಶೃತಿ, ಸಿಎಸ್‌ಸಿ ಸೇವಾದಾರರಾದ ಉಮೇಶ್, ದರ್ಶನ್ಹಾಗೂ ಗ್ರಾಮದ ರೈತ ಬಾಂಧವರು, ಸ್ವ-ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!