ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿಸರ ಮಾಹಿತಿ ಶಿಬಿರ ಹಾಗೂ ಸಸಿ ನೆಡುವ ಕಾರ್ಯಕ್ರಮ

ಸುಳೇಬೈಲು/ ಶಿವಮೊಗ್ಗ :
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಹಾಗೂ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಸುಳೇಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಮಾಹಿತಿ ಶಿಬಿರ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗದ ದೈಹಿಕ ಶಿಕ್ಷಣಾಧಿಕಾರಿಗಳಾದ ಪ್ರಕಾಶ್ ಹಾಗೂ ವಿಷಯ ಪರಿವೀಕ್ಷಕರಾದ ನಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪರಿಸರ ಸಂರಕ್ಷಣೆ, ವೃಕ್ಷಾರೋಪಣೆಯ ಮಹತ್ವ ಮತ್ತು ವಿದ್ಯಾರ್ಥಿಗಳು ಪ್ರಕೃತಿ ಸಂರಕ್ಷಣೆಯಲ್ಲಿ ವಹಿಸಬೇಕಾದ ಪಾತ್ರದ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಎಂ. ಶಿವರಾಂ ವಹಿಸಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪಲ್ಲವಿ, ಕೃಷಿ ಮೇಲ್ವಿಚಾರಕರಾದ ಸತೀಶ್ ಹಾಗೂ ಯೋಜನೆಯ ಸಿಬ್ಬಂದಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಧರ್ ಅವರು ಅತಿಥಿಗಳನ್ನು ಸ್ವಾಗತಿಸಿದರು.
ರಾಜಕುಮಾರ ಶಿಕ್ಷಕರು ವಂದನಾರ್ಪಣೆ ಸಲ್ಲಿಸಿದರು.
ರವಿಕುಮಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!