ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಧಾರವಾಡ ನಿರ್ಮಿತಿ ಕೇಂದ್ರದ ಭ್ರಷ್ಟಾಚಾರ :ಸಿಐಡಿ ತನಿಖೆಗೆ ಆಗ್ರಹ

ಹುಬ್ಬಳ್ಳಿ: ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾ‌ರ್ ಪಾಟೀಲ ಅಕ್ರಮ ನೇಮಕಾತಿ ರದ್ದುಪಡಿಸಬೇಕು ಅಲ್ಲದೆ ತಕ್ಷಣ ವಜಾ ಮಾಡಿ ಈತನ ಮತ್ತು ಈತನ ಸಹಚರರಿಂದ ನಡೆದ ಅಕ್ರಮ ಭ್ರಷ್ಟಾಚಾರವನ್ನು ವಿಶೇಷ ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ಸಮತಾಸೇನಾ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಆಗ್ರಹಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಿರ್ಮಿತಿ ಕೇಂದ್ರಗಳನ್ನು ಸ್ಥಾಪಿಸಿದ ಉದ್ದೇಶಗಳಿಗೆ ತದ್ವಿರುದ್ಧವಾಗಿ ಕಳೆದ ಹಲವಾರು ವರ್ಷಗಳಿಂದ ನಿರ್ಮಿತಿ ಕೇಂದ್ರಗಳ ಮೂಲಕ ಅಕ್ರಮ ಲೂಟಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಧಾರವಾಡದ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕನಾಗಿ ಅಕ್ರಮವಾಗಿ ನೇಮಕವಾಗಿ ತನ್ನ ಸಹಚರರ ಬಳಗವನ್ನು ಸೃಷ್ಟಿಸಿ ನೇರ ಭ್ರಷ್ಟಾಚಾರದಲ್ಲಿ ತೊಡಗಿರುವ ಶಿವಕುಮಾ‌ರ್ ಅವರನ್ನು ವಜಾ ಮಾಡಬೇಕು, ನಿಯಮಾನುಸಾರವಾಗಿ ಪತ್ರಿಕಾ ಪ್ರಕಟಣೆಯನ್ನು ನೀಡದೇ ತಮಗೆ ಬೇಕಾದವರನ್ನು ನೇಮಕ ಮಾಡಲಾಗಿದೆ. ಈತನ ಸಹಚರದಿಂದ ನಡೆದಿರುವ ಕೋಟ್ಯಾಂತರ ರೂ.ಅಕ್ರಮ ಅವ್ಯವಹಾರ, ಜಿ.ಎಸ್.ಟಿ ವಂಚನೆ, ಲೇಬ‌ರ್ ಸೆಸ್‌ ವಂಚನೆ, ಅರ್ಹರಿಗೆ ಕಾಮಗಾರಿಗಳಿಂದ ವಂಚನೆ, ಸರ್ವಾಧಿಕಾರಿ ಧೋರಣೆ ತೋರುತ್ತಿದ್ದು, ಈ ನಿಟ್ಟಿನಲ್ಲಿ ಸಿಐಡಿ ತನಿಖೆಗೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಈ ಪ್ರಕರಣದ ಕುರಿತಂತೆ ಮುಖ್ಯಮಂತ್ರಿಗಳು, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ವಸತಿ ಹಾಗೂ ಗೃಹ ಸಚಿವರ ಗಮನಕ್ಕೆ ತರಲಾಗುವುದು ಎಂದ ಅವರು, ಧಾರವಾಡ ಜಿಲ್ಲಾಧಿಕಾರಿಗಳಿಗೂ ಪ್ರತ್ಯೇಕ ದೂರು ಸಲ್ಲಿಸಿ ಹದಿನೈದು ದಿನಗಳ ಗಡುವು ನೀಡಲಾಗುವುದು, ವಿಳಂಬವಾದಲ್ಲಿ ಗಂಭೀರ ಹೋರಾಟಕ್ಕೆ ಸಮತಾ ಸೇನಾ ಮುಂದಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಶೋಕ ಕಾಶೆಣ್ಣವರ, ಹನುಮಂತ ತಳವಾರ, ಮಂಜುಳಾ ಬೆಣಗಿ, ಮಂಜುನಾಥ ಸಣ್ಣಕ್ಕಿ, ಇಮ್ಮಿಯಾಜ್ ಬಿಜಾಪೂರ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!