ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಂಗಳೂರು – ಬೆಳಗಾವಿ – ಮುಂಬೈ ನಡುವೆ ಸ್ಲೀಪರ್ ವಂದೇ ಭಾರತ ರೈಲು ಸಂಚಾರವನ್ನು ಪ್ರಾಂಭಿಸಲು ಮನವಿ

ಬೆಳಗಾವಿ : ಬೆಂಗಳೂರು – ಬೆಳಗಾವಿ – ಮುಂಬೈ ನಡುವೆ ಸ್ಲೀಪರ್ ವಂದೇ ಭಾರತ ರೈಲು ಸಂಚಾರವನ್ನು ಪ್ರಾಂಭಿಸಲು ಒತ್ತಾಯಿಸಿ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಸಂಸದ ಜಗದೀಶ ಶೆಟ್ಟರ್ ನವ ದೆಹಲಿಯಲ್ಲಿ ಭೇಟಿ ಮಾಡಿ ಒತ್ತಾಯಿಸಿದರು.

ಬೆಳಗಾವಿ ನಗರ ಅತೀ ವೇಗದಿಂದ ಬೆಳೆಯುತ್ತಿರುವ ನಗರ. ಮೇಲಾಗಿ ಬೆಂಗಳೂರು ನಂತರ ಎರಡನೇ ರಾಜಧಾನಿಯಂದು ಪರಿಗಣಿಸಲ್ಪಡುವ ನಗರ. ಶಿಕ್ಷಣ, ಉದ್ಯಮಿಕರಣ, ಆರೋಗ್ಯ ಸೇವೆ, ಕೃಷಿ ಇತ್ಯಾದಿ ರಂಗದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಲಿದೆ.

ಈ ಮಾರ್ಗದಲ್ಲಿ ಸ್ಲೀಪರ್ ವಂದೇ ಭಾರತ ರೈಲು ಸಂಚಾರ ಪ್ರಾರಂಭಿಸಿದಲ್ಲಿ ಬೆಳಗಾವಿ ಸುತ್ತಮುತ್ತಲಿನ ತಾಲೂಕುಗಳ ಹಾಗೂ ಇತರೆ ಜಿಲ್ಲೆಗಳ ಅಭಿವೃದ್ಧಿಗೆ ಸಹಾಯಕಾರಿಯಾಗಲಿದೆ. ಮುಂಬೈ ನಗರವನ್ನು ಅತ್ಯಂತ ಅಲ್ಪಾವಧಿ ಸಮಯದಲ್ಲಿ ತಲುಪುವುದರಿಂದ ಹಲವು ಪ್ರದೇಶಗಳ ಆರ್ಥಿಕ ಬೆಳವಣಿಗೆಗೆ ಅನುಕೂಲಕರವಾಗಲಿದೆ, ಅಲ್ಲದೇ ಈ ರೈಲು ಉತ್ತರ ಕರ್ನಾಟಕದ ಹೆಚ್ಚಿನ ಪ್ರದೇಶದಲ್ಲಿ ಸಂಚರಿಸುವುದರಿಂದ ಪ್ರಾದೇಶಿಕ ಸಮತೋಲನವನ್ನು ಸಹ ಕಾಪಾಡುವಲ್ಲಿ ಸಹಕಾರಿಯಾಗಲಿದೆ ಮತ್ತು ಉತ್ತರ ಕರ್ನಾಟಕದ ಬಹು ಜನರ ಬೇಡಿಕೆ ಸಹ ಇದಾಗಿದೆ ಎಂದು ತಿಳಿಸಲಾಯಿತು.

ಬೆಂಗಳೂರು – ಬೆಳಗಾವಿ – ಪುಣೆ – ಮುಂಬೈ ಈ ಮಾರ್ಗದಲ್ಲಿ ಸ್ಲೀಪರ್ ವಂದೇ ಭಾರತ ರೈಲು ಸಂಚರಿಸುವ ಬಗ್ಗೆ ವಿಷಯವನ್ನು ಮುಂಬರುವ ದಿನಗಳಲ್ಲಿ ಅಗತ್ಯ ಪರಿಗಣಿಸುವುದಾಗಿ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಭರವಸೆ ನೀಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!