
ಬಳ್ಳಾರಿ / ಕಂಪ್ಲಿ : ಮಹಿಳೆಯರು ಆರ್ಥಿಕ ಸ್ವಾವಲಂಬನೆಗೊಳ್ಳಲು ಕೌಶಲ ಅಗತ್ಯವಿದ್ದು ತರಬೇತಿ ಮೂಲಕ ಕೌಶಲ ಗಳಿಸುವಲ್ಲಿ ಮುಂದಾಗಬೇಕು ಎಂದು ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಹೇಳಿದರು.
ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳಿ ಆಯೋಜಿಸಿದ ಮಹಿಳಾ ಸ್ವ ಉದ್ಯೋಗ ಕೌಶಲ ವಸ್ತುಗಳ ಪ್ರದರ್ಶನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಸ್ವ ಉದ್ಯೋಗಕ್ಕೆ ಕೌಶಲ ಅಗತ್ಯವಿದೆ. ಪ್ರತಿಯೊಬ್ಬರಲ್ಲೂ ಸುಪ್ತವಾಗಿರುವ ಕೌಶಲವನ್ನು ಬಳಸಿಕೊಂಡು ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಮೂಲಕ ಆದಾಯ ಗಳಿಸಬೇಕಿದೆ ಎಂದರು.
ಅಕ್ಕನ ಬಳಗದ ಸದಸ್ಯೆಯರು ಉತ್ಪಾದಿಸಿದ ಸಾವಯವ ವಸ್ತು, ಆಹಾರ ಪದಾರ್ಥ ಸೇರಿ ನಾನಾ ವಸ್ತುಗಳ ಪ್ರದರ್ಶನಗೊಂಡವು. ಸಾಂಗತ್ರಯ ಸಂಸ್ಕೃತ ಪಾಠಶಾಲೆ ಅಧ್ಯಕ್ಷ ಇಟಗಿ ಬಸವರಾಜಗೌಡ ಕಾರ್ಯಕ್ರಮಕ್ಕೆ ಚಾಲನೆ
ನೀಡಿದರು.
ಅಕ್ಕಮಹಾದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಡಾ.ಶಾರದಾ ಜಗನ್ನಾಥ ಹಿರೇಮಠ, ಪಾಠಶಾಲೆ ಮಾಜಿ ಅಧ್ಯಕ್ಷ ಎಸ್.ಎಸ್. ಎಂ.ಚನ್ನಬಸವರಾಜ ಸೇರಿ ಅಕ್ಕನ ಬಳಗದ ಪದಾಧಿಕಾರಿಗಳು, ಸದಸ್ಯೆಯರು ಸೇರಿದಂತೆ ಇತರರು ಹಾಜರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















