ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾ.ಪಂ ಅನುದಾನ ದುರ್ಬಳಕೆ: ಪಿಡಿಒ, ಅಧ್ಯಕ್ಷ, ಸದಸ್ಯೆಗೆ ಮೂರು ವರ್ಷ ಜೈಲು ಶಿಕ್ಷೆ, ನ್ಯಾಯಾಲಯದ ತೀರ್ಪು ಪ್ರಕಟ

ವಿಜಯನಗರ / ಹೊಸಪೇಟೆ: ಇಂದಿರಾ ಆವಾಸ್ ಯೋಜನೆಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ವಿಜಯನಗರ ಜಿಲ್ಲೆಯ ಮರಬ್ಬಿಹಾಳು ಗ್ರಾಮ ಪಂಚಾಯಿತಿಯ ಪಿಡಿಒ, ಅಧ್ಯಕ್ಷ ಮತ್ತು ಸದಸ್ಯೆಗೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 90,000 ರೂಪಾಯಿ ದಂಡ ವಿಧಿಸಿ ವಿಜಯನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಮಂಗಳವಾರ ತೀರ್ಪು ಪ್ರಕಟಿಸಿದೆ.

ಮರಬ್ಬಿಹಾಳು ಗ್ರಾಮ ಪಂಚಾಯಿತಿಯ ಪಿಡಿಒ ವಸಂತರಾಜ್, ಗ್ರಾ.ಪಂ ಸದಸ್ಯೆ ಹನುಮವ್ವ ಹಾಗೂ ಗ್ರಾಪಂ ಅಧ್ಯಕ್ಷ ರಾಮಚಂದ್ರ ನಾಯ್ಕ ಶಿಕ್ಷೆಗೆ ಒಳಗಾದ ಅಪರಾಧಿಗಳು. ಇವರು ಇಂದಿರಾ ಆವಾಸ್ ಯೋಜನೆಯ ಸರ್ಕಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಶಿಕ್ಷೆ ವಿಧಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಡಿ ವೈ ಎಸ್ ಪಿ ಎನ್.ಆ‌ರ್. ಮಹಾಂತರಡ್ಡಿ ಅವರು ತನಿಖೆ ನಡೆಸಿ, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ 22 0 420, ថ໐ 13(1)(2), 13(2) 468, 471ರ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಡಿ.ನಾರಾಯಣ ಅವರು ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!