ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಾಣಿಗ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವಂತೆ ತಹಶೀಲ್ದಾರ್ ಗೆ ಮನವಿ

ಬಳ್ಳಾರಿ / ಕಂಪ್ಲಿ : ಗಾಣಿಗ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ, ಗಾಣಿಗ ಸಮುದಾಯ ಸಂಘದ ಎಮ್ಮಿಗನೂರು ಘಟಕದಿಂದ ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.
ನಂತರ ಅಧ್ಯಕ್ಷ ಎಸ್.ಶರಣಬಸವನಗೌಡ ಮಾತನಾಡಿ, ತಾಲೂಕು ವ್ಯಾಪ್ತಿಯ ಎಮ್ಮಿಗನೂರು ಗ್ರಾಮದಲ್ಲಿ 80ಕ್ಕೂ ಹೆಚ್ಚು ಗಾಣಿಗ ಕುಟುಂಬಗಳು ವಾಸಿಸುತ್ತಿದ್ದು, ಈ ಕುಟುಂಬಗಳಿಗೆ ಜಾತಿ ಪ್ರಮಾಣದ ಅಗತ್ಯತೆ ಇದೆ. ಇದರಿಂದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ಈ ಹಿಂದೆ ಗಾಣಿಗ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡಲು ನಿರಾಕರಿಸಿದ್ದರು. ನಂತರ ಗ್ರಾಮಕ್ಕೆ ದಂಡಾಧಿಕಾರಿಗಳು ಆಗಮಿಸಿ, ಪಂಚನಾಮ ಮಾಡಿ, ನಂತರ ಗಾಣಿಗ ಸಮುದಾಯದವರಿಗೆ ಜಾತಿ ಪ್ರಮಾಣ ನೀಡಿದ್ದರು. ಆದರೆ, ಈಗ ಮತ್ತೇ ಗಾಣಿಗ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸವಾಗಿದೆ. ಆದ್ದರಿಂದ ಪ್ರಸ್ತುತ ದಂಡಾಧಿಕಾರಿಗಳು ಪರಿಶೀಲಿಸಿ ಹಾಗೂ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ಬಹಳ ಅವಶ್ಯ ಇರುವುದರಿಂದ ಆದಷ್ಟು ತ್ವರಿತಗತಿಯಲ್ಲಿ ನಮಗೆ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಮನವಿ ಮಾಡಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಬಾವಿಕಟ್ಟೆ ವಿರೇಶ, ಸಂಘಟನಾ ಕಾರ್ಯದರ್ಶಿ ಎಸ್.ಹಂಪಣ್ಣ, ಕಾನೂನು ಸಲಹೆಗಾರ ಬಿ.ಸದಾಶಿವ, ಸದಸ್ಯರಾದ ಉಮೇಶ, ಮುಖಂಡರಾದ ಚಂದ್ರಪ್ಪ, ಬಾವಿಕಟ್ಟೆ ವಿರೇಶ, ಎಸ್.ಮಂಜುನಾಥ, ಎಸ್.ಸಣ್ಣ ಶರಣಪ್ಪ, ಬಾವಿಕಟ್ಟೆ ದೊಡ್ಡಬಸುವ, ಬಸಪ್ಪ, ಜಡಿಯಪ್ಪ, ಗವಿಸಿದ್ದಪ್ಪ, ದೊಡ್ಡಬಸವ ಸೇರಿದಂತೆ ಸಮುದಾಯದವರು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!