
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನಕ ವಜ್ರ ಗ್ರಾಮ ಪಂಚಾಯಿತಿಯಲ್ಲಿರುವ ಚಿನಕವಜ್ರ ಗ್ರಾಮದ ರಸ್ತೆಯ ಎರಡು ಭಾಗಗಳಲ್ಲಿ ಕಸದ ರಾಶಿ ಮತ್ತು ಚರಂಡಿಯ ಗಬ್ಬು ವಾಸನೆ ಬರುವ ಅಧಿಕಾರಿಗಳಿಗೆ ಸ್ವಾಗತ ಕೋರುವ ಸ್ಥಿತಿಯಾಗಿದೆ.
ಗ್ರಾಮದಲ್ಲಿ 200 ಮನೆಗಳಿದ್ದರೂ ಇಲ್ಲಿಗೆ ಮೂಲ ಸೌಕರ್ಯವಾದ ನೀರು ಮತ್ತು ಚರಂಡಿಯ ಸ್ವಚ್ಛತೆಯು ಮರೀಚಿಕೆಯಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಚೇರಿಗೆ ಸೀಮಿತವಾಗಿದ್ದಾರೆ. ಗ್ರಾಮಸ್ಥರು ಮತ್ತು ಗ್ರಾಮಗಳ ಬಗ್ಗೆ ನಿರ್ಲಕ್ಷ್ಯ ಹೊಂದಿದ್ದಾರೆ.
ಎರಡು ತಿಂಗಳಿಗಳಿಂದ ಚರಂಡಿಯ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದೆ ಆದರೆ ಪಕ್ಕದಲ್ಲಿ ಕುಡಿಯುವ ನೀರಿನ ಘಟಕ ಇದರಿಂದ ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಚರಂಡಿ ಬಂದ್ ಆಗಿರುವುದರಿಂದ ಕೊಳಚೆ ನೀರು, ಚರಂಡಿಯಲ್ಲಿ ನಿಂತು ಸೊಳ್ಳೆ ಮತ್ತು ನೊಣಗಳ ಕಾಟ ವಿಪರೀತವಾಗಿದೆ. ಮಳೆ ಬಂದಾಗ ಪರಿಸ್ಥಿತಿ ಮತ್ತಷ್ಟು ಹದಗಿಡುತ್ತದೆ. ಈ ಸಮಸ್ಯೆ ಬಗೆಹರಿಸಬೇಕಾಗಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಸಮಸ್ಯೆ ಕೇಳುವರು ಯಾರು?
ಸುಮಾರು ದಿನಗಳಿಂದ ಚರಂಡಿ ಇದ್ದರೂ ಸ್ವಚ್ಛತೆ ಇಲ್ಲದೆ ಗಬ್ಬು ವಾಸನೆ ಮತ್ತು ಸೊಳ್ಳೆಗಳ ವಾಸಸ್ಥಾನಕ್ಕೆ ನಮ್ಮ ಊರಿನ ಚರಂಡಿ ಮನೆಯಾಗಿದೆ. ಇದರಿಂದ ಗ್ರಾಮದಲ್ಲಿರುವ ಅಂಗನವಾಡಿಯ ಮಕ್ಕಳು ಹಾಗೂ ವೃದ್ಧರಿಗೆ ಆರೋಗ್ಯದಲ್ಲಿ ಏರುಪೇರು ಆಗುತ್ತಿದೆ ಚರಂಡಿಯ ಒಳಗೆ ಗಿಡ ಜಂಡು ಬೆಳೆದು ಚರಂಡಿಯು ಮಾಯವಾಗಿದೆ. ಚರಂಡಿ ಅಕ್ಕ ಪಕ್ಕದ ಮನೆಯವರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿಯಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ




















