ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಳೆಗಾಗಿ ಕೋಟೆ ಭಾಗದ ರೈತರಿಂದ ಮಳೆ ಮಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ ಕಾರ್ಯಕ್ರಮ

ಕೊಟ್ಟೂರು: ತಾಲೂಕಿನಲ್ಲಿ ಮಳೆ ಬಾರದ ನಿಮಿತ್ತ ಶ್ರೀ ಗುರು ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಟ್ಟಣದ ಭಕ್ತರು ಶ್ರೀ ಸ್ವಾಮಿಗೆ ಪೂಜೆ ಸಲ್ಲಿಸಿ.
ನಂತರ ಪಟ್ಟಣದ ಮಳೆ ಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಕೊಟ್ಟೂರೇಶ್ವರ ಭಜನಾ ಮಂಡಳಿ ಮಳೆಗಾಗಿ ಪ್ರಾರ್ಥಿಸಿ ವರುಣ ದೇವನನ್ನು ಕುರಿತು ಭಜನೆ ಮಾಡಿದರು.
ದೇವಾಲಯವನ್ನು ಭಕ್ತರು ಹಸಿರು ತೋರಣಗಳಿಂದ ಅಲಂಕರಿಸಿದ್ದರು. ನಂತರ ಮಳೆ ತೋರಣಗಳಿಂದ ಮಲ್ಲೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು.

ಪಟ್ಟಣದ ಕೋಟೆ ಭಾಗದ ರೈತರು ಮಳೆಗಾಗಿ ಮಲ್ಲೇಶ್ವರ ಸ್ವಾಮಿಯ ಲಿಂಗದ ಸುತ್ತ ಮಣ್ಣಿನ ಕಟ್ಟೆ ಕಟ್ಟಿ ಪೂಜೆ ಸಲ್ಲಿಸಿದ ತರುವಾಯ ಗಂಗೆ ಪೂಜೆ ಸಲ್ಲಿಸಿ ಕರಗಲ್ಲಿಗೆ ಪೂಜೆ ಸಲ್ಲಿಸಲಾಯಿತು.

ನಂತರ ಲಿಂಗದ ಸುತ್ತ ಕಟ್ಟಿದ ಮಣ್ಣಿನ ಕಟ್ಟೆಗೆ ಭಕ್ತರು ೧೩ ಬಿಂದಿಗೆ ನೀರನ್ನು ಹಾಕಿದ ನಂತರ ಮಣ್ಣಿನ ಕಟ್ಟೆ ಈಶಾನ್ಯ ಮೂಲೆಗೆ ಹೊಡೆದಿದ್ದರಿಂದ ಈ ಸಲ ಮಳೆಸಮೃದ್ಧವಾಗಿ ಬರಲಿದೆ ಎಂದು ಭಕ್ತರು ಹರ್ಷಗೊಂಡರು.

ವರದಿ ಕೆ.ಗೋಣೆಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!