ಮಹಿಳಾ ಸಬಲೀಕರಣವನ್ನು ಗಟ್ಟಿಗೊಳಿಸುವ ಬಗ್ಗೆ ನಿರಂತರವಾಗಿ ಮಾತನಾಡುವ ಕಾಂಗ್ರೆಸ್ ಸರ್ಕಾರವು ಈ ಬಾರಿ ಕರ್ನಾಟಕ ಸಚಿವ ಸಂಪುಟ ರಚನೆಯಲ್ಲಿ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡದಿರುವುದು ವಿಷಾದನೀಯ ಎಂದು ಡಾ. ಮಹದೇಶ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರಿಗೆ ಸಮಾನ ಹಕ್ಕು ಮತ್ತು ಸಮಾನ ಅವಕಾಶ ದೊರೆಯಬೇಕು. ಅದರಲ್ಲೂ ಆಡಳಿತದ ಉನ್ನತ ಮಟ್ಟದಲ್ಲಿಯೇ ಮಹಿಳೆಯರ ಪ್ರಾತಿನಿಧ್ಯ ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.
ಆದ್ದರಿಂದ, ಕರ್ನಾಟಕ ಸರ್ಕಾರವು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಿ ಅರ್ಹ ಮಹಿಳಾ ನಾಯಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ನೀಡುತ್ತಿರುವ ಭರವಸೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಅವರು ಆಗ್ರಹಿಸಿದರು.
- ಸುಧೀಂದ್ರ ಡಿ ಅರಕಲಗೂಡು




















