ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ.ಕ ಭಾಗಕ್ಕೆ ಪ್ರತ್ಯೇಕ ನೆರವಿಲ್ಲ : ಕೇಂದ್ರರಾಜ್ಯಕ್ಕೆ ಒದಗಿಸಲಾಗುವ ಅನುದಾನವನ್ನೇ ಸಮರ್ಪಕವಾಗಿ ಬಳಸಿಕೊಳ್ಳಲು ಸಲಹೆ.

‌ಬಳ್ಳಾರಿ: ಸಂವಿಧಾನದ ವಿಧಿ 371(ಜೆ)ಯಡಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ವಾರ್ಷಿಕ ಕೇಂದ್ರ ಆರ್ಥಿಕ ನೆರವು ಒದಗಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ರಾಜ್ಯಕ್ಕೆ ಬಿಡುಗಡೆಯಾಗುವ ಸಾಮಾನ್ಯ ಕೇಂದ್ರ ಅನುದಾನವನ್ನೇ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ತಿಳಿಸಿದೆ.

ಲೋಕಸಭೆಯಲ್ಲಿ ಬಳ್ಳಾರಿ ಸಂಸದ ಇ. ತುಕಾರಾಮ್ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಈ ಕುರಿತು ಲಿಖಿತ ಉತ್ತರವನ್ನು ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದಿರುವಿಕೆಯನ್ನು ನಿವಾರಿಸಲು ಮತ್ತು ವಿಶೇಷ ಅಗತ್ಯಗಳನ್ನು ಪೂರೈಸಲು ಸಂವಿಧಾನದ 371(ಜೆ) ವಿಧಿಯ ವಿಶೇಷ ನಿಬಂಧನೆಗಳಡಿ ಪ್ರತಿವರ್ಷ ಪ್ರತ್ಯೇಕ ಕೇಂದ್ರ ಆರ್ಥಿಕ ನೆರವು ನೀಡಲು ಕರ್ನಾಟಕ ಸರ್ಕಾರ ಪ್ರಸ್ತಾಪ ಸಲ್ಲಿಸಿದೆಯೇ? ಎಂಬ

ಪ್ರಸ್ತಾಪದ ಮೇಲೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮವೇನು? ಹಾಗೂ ಪ್ರತ್ಯೇಕ ಅನುದಾನ ನೀಡಲು ಕಾಲಮಿತಿ ಇದೆಯೇ ಎಂದು ಸಂಸದರು ಪ್ರಶ್ನಿಸಿದ್ದರು.

ಸಂಸದರ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ತೆರಿಗೆ ಮತ್ತು ಸುಂಕಗಳ ಹಂಚಿಕೆ ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯ ಗ್ರಾಂಟ್ಸ್-ಇನ್-ಏಡ್’, ‘ಹಣಕಾಸು ಆಯೋಗ’ದ ಅನುದಾನ ಹಾಗೂ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ನೀಡುವ ವಿಶೇಷ ನೆರವು (ಎಸ್‌ಎಎಸ್‌ಸಿಐ) ಯೋಜನೆಯಡಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಈಗಾಗಲೇ ಗಣನೀಯ ಪ್ರಮಾಣದ ಆರ್ಥಿಕ ಸಂಪನ್ಮೂಲವನ್ನು ಒದಗಿಸುತ್ತಿದೆ’ ಎಂದು ವಿವರಣೆ ನೀಡಿದ್ದಾರೆ.

” ಕೇಂದ್ರದ ಸಚಿವರ ಉತ್ತರ ಸಮಾಧಾನ ತಂದಿಲ್ಲ. ಹೀಗಾಗಿಯೇ ಕಲ್ಯಾಣ ಕರ್ನಾಟಕ ಭಾಗದ ಪ್ರತಿನಿಧಿಗಳು ಸಚಿವರನ್ನು ಭೇಟಿಯಾಗಿ, ರಾಜ್ಯಕ್ಕೆ ಅಗತ್ಯವಿರುವ ಬೇಡಿಕೆ ಪಟ್ಟಿಯನ್ನು ಸಲ್ಲಿಸಿದ್ದೇವೆ. ರಾಜ್ಯದಿಂದ ಸೂಕ್ತ ಪ್ರಸ್ತಾವನೆ ಕಳುಹಿಸಿಕೊಟ್ಟರೆ ಪರಿಶೀಲನೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ “.

  • ಇ. ತುಕಾರಾಂ
    ಸಂಸದರು.
    ಬಳ್ಳಾರಿ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!